ಕುಂದಾಪುರ

ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ,ವಿಜ್ಞಾನಿಗಳ ತಂಡ ಭೇಟಿ

Share

Advertisement
Advertisement

ಕುಂದಾಪುರ:ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಹಾಗೂ ಮುವತ್ತುಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ ಬಾಧೆಯನ್ನು ಅಧ್ಯಾಯನವನ್ನು ಮಾಡಲು ವಿಜ್ಞಾನಿಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ತೆಂಗು ಬೆಳೆಗಾರ ರೈತರೊಂದಿಗೆ ಚರ್ಚಿಸಿದರು.
ಪ್ರೆÇ.ಡಾ.ರೇವಣ್ಣ ರೇವಣ್ಣನವರ್ (ಝೆಎಹೆಚ್‍ಆರ್‍ಎಸ್),ಸಾಹಾಯಕ ಪ್ರಾಧ್ಯಾಪಕ ಡಾ.ಮೋಹನ ಕುಮಾರ್ (ಝೆಎಹೆಚ್‍ಆರ್‍ಎಸ್),ಹಿರಿಯ ಎಡಿ ತೋಟಗಾರಿಕೆ ನಿಧೀಶ ಕೆ.ಜೆ ಹಾಗೂ ರೈತರಾದ ಚಂದ್ರ ಪೂಜಾರಿ ಕನ್ನಡ ಕುದ್ರು,ಜೈಸನ್ ಪಿಂಟೊ ಉಪಸ್ಥಿತರಿದ್ದರು.

Advertisement

ಮರಗಳಿಗೆ ತಗುಲಿದ ರೋಗವನ್ನು ಪತ್ತೆ ಹಚ್ಚಿದ ವಿಜ್ಞಾನಿಗಳ ತಂಡ ಕಪ್ಪು ತಲೆ ಗರಿತಿನ್ನುವ ಹುಳು ಬಾಧೆಯಿಂದ ತೆಂಗಿನ ಮರಗಳು ರೋಗ ಬಾಧೆಗೆ ತುತ್ತಾಗಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.ಮೂಲತಃ ದಕ್ಷಿಣ ಏಷ್ಯಾ ದೇಶಗಳಲ್ಲಿ ಕಂಡು ಬರುವ ಕಪ್ಪು ತಲೆ ಗರಿತಿನ್ನುವ ಹುಳು ಕೇರಳ ಮುಖಾಂತರ ದಕ್ಷಿಣ ಭಾರತಕ್ಕೆ ಪ್ರವೇಶ ಮಾಡಿದೆ.ಬೇಸಿಗೆಯಲ್ಲಿ ಹೆಚ್ಚಾಗಿ ತೆಂಗಿನ ಮರಗಳು ಹುಳು ಬಾಧೆಯಿಂದ ರೋಗಕ್ಕೆ ತುತ್ತಾಗುತ್ತವೆ.ಹೆಚ್ಚು ಬಿಸಿಲು,ಸೆಖೆ,ನೀರಿನ ಕೊರತೆ ಹಾಗೂ ಪೆÇಷಕಾಂಶದ ಕೊರತೆಯಿಂದ ಬಳಲುತ್ತಿರುವ ಮರಗಳು ಕಪ್ಪು ತಲೆಗರಿತಿನ್ನುವ ಹುಳ ಬಾಧೆಗೆ ಬಲಿಯಾಗುತ್ತವೆ ಎಂದು ಡಾ.ರೇವಣ್ಣ ರೇವಣ್ಣನವರ್ ಅವರು ರೈತರೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಬೆಳಕಿನ ಆಕರ್ಷಕ ಬಲೆ ಅಳವಡಿಕೆಗೆ ಕ್ರಮ:ತೆಂಗಿನ ಮರಕ್ಕೆ ತಗುಲಿದ ಹುಳ ಬಾಧೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ ಬೆಳಕಿನ ಆಕರ್ಷಕ ಬಲೆ ಅಳವಡಿಕೆಯನ್ನು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

15 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago