ಕುಂದಾಪುರ

ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ,ವಿಜ್ಞಾನಿಗಳ ತಂಡ ಭೇಟಿ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಹಾಗೂ ಮುವತ್ತುಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ ಬಾಧೆಯನ್ನು ಅಧ್ಯಾಯನವನ್ನು ಮಾಡಲು ವಿಜ್ಞಾನಿಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ತೆಂಗು ಬೆಳೆಗಾರ ರೈತರೊಂದಿಗೆ ಚರ್ಚಿಸಿದರು.
ಪ್ರೆÇ.ಡಾ.ರೇವಣ್ಣ ರೇವಣ್ಣನವರ್ (ಝೆಎಹೆಚ್‍ಆರ್‍ಎಸ್),ಸಾಹಾಯಕ ಪ್ರಾಧ್ಯಾಪಕ ಡಾ.ಮೋಹನ ಕುಮಾರ್ (ಝೆಎಹೆಚ್‍ಆರ್‍ಎಸ್),ಹಿರಿಯ ಎಡಿ ತೋಟಗಾರಿಕೆ ನಿಧೀಶ ಕೆ.ಜೆ ಹಾಗೂ ರೈತರಾದ ಚಂದ್ರ ಪೂಜಾರಿ ಕನ್ನಡ ಕುದ್ರು,ಜೈಸನ್ ಪಿಂಟೊ ಉಪಸ್ಥಿತರಿದ್ದರು.

Advertisement

ಮರಗಳಿಗೆ ತಗುಲಿದ ರೋಗವನ್ನು ಪತ್ತೆ ಹಚ್ಚಿದ ವಿಜ್ಞಾನಿಗಳ ತಂಡ ಕಪ್ಪು ತಲೆ ಗರಿತಿನ್ನುವ ಹುಳು ಬಾಧೆಯಿಂದ ತೆಂಗಿನ ಮರಗಳು ರೋಗ ಬಾಧೆಗೆ ತುತ್ತಾಗಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.ಮೂಲತಃ ದಕ್ಷಿಣ ಏಷ್ಯಾ ದೇಶಗಳಲ್ಲಿ ಕಂಡು ಬರುವ ಕಪ್ಪು ತಲೆ ಗರಿತಿನ್ನುವ ಹುಳು ಕೇರಳ ಮುಖಾಂತರ ದಕ್ಷಿಣ ಭಾರತಕ್ಕೆ ಪ್ರವೇಶ ಮಾಡಿದೆ.ಬೇಸಿಗೆಯಲ್ಲಿ ಹೆಚ್ಚಾಗಿ ತೆಂಗಿನ ಮರಗಳು ಹುಳು ಬಾಧೆಯಿಂದ ರೋಗಕ್ಕೆ ತುತ್ತಾಗುತ್ತವೆ.ಹೆಚ್ಚು ಬಿಸಿಲು,ಸೆಖೆ,ನೀರಿನ ಕೊರತೆ ಹಾಗೂ ಪೆÇಷಕಾಂಶದ ಕೊರತೆಯಿಂದ ಬಳಲುತ್ತಿರುವ ಮರಗಳು ಕಪ್ಪು ತಲೆಗರಿತಿನ್ನುವ ಹುಳ ಬಾಧೆಗೆ ಬಲಿಯಾಗುತ್ತವೆ ಎಂದು ಡಾ.ರೇವಣ್ಣ ರೇವಣ್ಣನವರ್ ಅವರು ರೈತರೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಬೆಳಕಿನ ಆಕರ್ಷಕ ಬಲೆ ಅಳವಡಿಕೆಗೆ ಕ್ರಮ:ತೆಂಗಿನ ಮರಕ್ಕೆ ತಗುಲಿದ ಹುಳ ಬಾಧೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ ಬೆಳಕಿನ ಆಕರ್ಷಕ ಬಲೆ ಅಳವಡಿಕೆಯನ್ನು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

7 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago