ಕುಂದಾಪುರ

ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ,ವಿಜ್ಞಾನಿಗಳ ತಂಡ ಭೇಟಿ

Share

ಕುಂದಾಪುರ:ತಾಲೂಕಿನ ಹೆಮ್ಮಾಡಿ ಗ್ರಾಮದ ಕನ್ನಡ ಕುದ್ರು ಹಾಗೂ ಮುವತ್ತುಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗ ಬಾಧೆಯನ್ನು ಅಧ್ಯಾಯನವನ್ನು ಮಾಡಲು ವಿಜ್ಞಾನಿಗಳ ತಂಡ ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ತೆಂಗು ಬೆಳೆಗಾರ ರೈತರೊಂದಿಗೆ ಚರ್ಚಿಸಿದರು.
ಪ್ರೆÇ.ಡಾ.ರೇವಣ್ಣ ರೇವಣ್ಣನವರ್ (ಝೆಎಹೆಚ್‍ಆರ್‍ಎಸ್),ಸಾಹಾಯಕ ಪ್ರಾಧ್ಯಾಪಕ ಡಾ.ಮೋಹನ ಕುಮಾರ್ (ಝೆಎಹೆಚ್‍ಆರ್‍ಎಸ್),ಹಿರಿಯ ಎಡಿ ತೋಟಗಾರಿಕೆ ನಿಧೀಶ ಕೆ.ಜೆ ಹಾಗೂ ರೈತರಾದ ಚಂದ್ರ ಪೂಜಾರಿ ಕನ್ನಡ ಕುದ್ರು,ಜೈಸನ್ ಪಿಂಟೊ ಉಪಸ್ಥಿತರಿದ್ದರು.

ಮರಗಳಿಗೆ ತಗುಲಿದ ರೋಗವನ್ನು ಪತ್ತೆ ಹಚ್ಚಿದ ವಿಜ್ಞಾನಿಗಳ ತಂಡ ಕಪ್ಪು ತಲೆ ಗರಿತಿನ್ನುವ ಹುಳು ಬಾಧೆಯಿಂದ ತೆಂಗಿನ ಮರಗಳು ರೋಗ ಬಾಧೆಗೆ ತುತ್ತಾಗಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.ಮೂಲತಃ ದಕ್ಷಿಣ ಏಷ್ಯಾ ದೇಶಗಳಲ್ಲಿ ಕಂಡು ಬರುವ ಕಪ್ಪು ತಲೆ ಗರಿತಿನ್ನುವ ಹುಳು ಕೇರಳ ಮುಖಾಂತರ ದಕ್ಷಿಣ ಭಾರತಕ್ಕೆ ಪ್ರವೇಶ ಮಾಡಿದೆ.ಬೇಸಿಗೆಯಲ್ಲಿ ಹೆಚ್ಚಾಗಿ ತೆಂಗಿನ ಮರಗಳು ಹುಳು ಬಾಧೆಯಿಂದ ರೋಗಕ್ಕೆ ತುತ್ತಾಗುತ್ತವೆ.ಹೆಚ್ಚು ಬಿಸಿಲು,ಸೆಖೆ,ನೀರಿನ ಕೊರತೆ ಹಾಗೂ ಪೆÇಷಕಾಂಶದ ಕೊರತೆಯಿಂದ ಬಳಲುತ್ತಿರುವ ಮರಗಳು ಕಪ್ಪು ತಲೆಗರಿತಿನ್ನುವ ಹುಳ ಬಾಧೆಗೆ ಬಲಿಯಾಗುತ್ತವೆ ಎಂದು ಡಾ.ರೇವಣ್ಣ ರೇವಣ್ಣನವರ್ ಅವರು ರೈತರೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಬೆಳಕಿನ ಆಕರ್ಷಕ ಬಲೆ ಅಳವಡಿಕೆಗೆ ಕ್ರಮ:ತೆಂಗಿನ ಮರಕ್ಕೆ ತಗುಲಿದ ಹುಳ ಬಾಧೆಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ ಬೆಳಕಿನ ಆಕರ್ಷಕ ಬಲೆ ಅಳವಡಿಕೆಯನ್ನು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago