ಕುಂದಾಪುರ:ಶಂಕರನಾರಾಯಣ ಠಾಣಾ ಪೊಲೀಸ್ ಉಪನಿರೀಕ್ಷಕರಾದ(ಕಾ.ಸು) ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ.(ತನಿಖೆ) ಮತ್ತು ಸಿಬ್ಬಂದಿಯವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅಮೀರ್ ಝನುದ್ದೀನ್, (23), ಗುಲ್ವಾಡಿ ಗ್ರಾಮ, ಕುಂದಾಪುರ, 2) ಮೊಹಮ್ಮದ್ ಮುನಾವರ್ (21),ಬಿಳಲಖಂಡ ಗ್ರಾಮ, ಭಟ್ಕಳ ತಾಲೂಕು, 3) ನಿಸಾರ್ @ ಆಸೀಫ್ ಅನ್ನಾರ್ ಪ್ರಾಯ (24), ಉಸ್ಮಾನ್ ನಗರ, , ಭಟ್ಕಳ ತಾಲೂಕು ಇವರನ್ನು ದಿನಾಂಕ: 28/03/2024 ರಂದು ದಸ್ತಗಿರಿ ಮಾಡಿ ಅವರುಗಳಿಂದ 11.25 ಕ್ವಿಂಟಾಲ್ ಸಿಪ್ಪೆ ಅಡಿಕೆ , 40 ಕೆ.ಜೆ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ KA-47-9135 ನಂಬ್ರ ಪಿಕ್ಆಪ್ ವಾಹನ ಹಾಗೂ KA-20-ET-6215 ನೇ ನಂಬ್ರದ ಸ್ಕೂಟರ್ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ಮೌಲ್ಯ 4,05,750/- ರೂಪಾಯಿ ಆಗಬಹುದು. ಪ್ರಕರಣದ ಪತ್ತೆ ಕಾರ್ಯದಲ್ಲಿ ನಾಸೀರ್ ಹುಸೇನ್ ಪಿಎಸ್ಐ (ಕಾ.ಸು) ಮತ್ತು ಶಂಭುಲಿಂಗಯ್ಯ ಎಮ್.ಇ. ಪಿಎಸ್ಐ (ತನಿಖೆ) ಶಂಕರನಾರಾಯಣ ಠಾಣೆ, ಸಿಬ್ಬಂದಿಗಳಾದ ಪುನೀತ್ ಕುಮಾರ್, ಸಚಿನ್, ಲೋಹಿತ್ ಕುಮಾರ್, ಮೌನೇಶ್, ರಾಕೇಶ್, ಪ್ರಕಾಶ್, ರಾಘವೇಂದ್ರ, ಮಂಜುನಾಥ್ ಭಾಗವಹಿಸಿದ್ದಾರೆ
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…