ಕುಂದಾಪುರ

ಗಾಂಚಾ ಮಾರಾಟಕ್ಕೆ ಯತ್ನ, ತ್ರಿಪುರಾ ಮೂಲದ ಇಬ್ಬರು ಯುವಕರು ಅರೆಸ್ಟ್

Share

ಮಂಗಳೂರು:ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ತ್ರಿಪುರ ಮೂಲದ ಆರೋಪಿಗಳನ್ನು ಖಚಿತ ಮಾಹಿತಿಯಂತೆ ಮುಲ್ಕಿ ಕೆಎಸ್ ರಾವ್ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಬಂಧಿಸಿದ್ದು ಆರೋಪಿಗಳಿಂದ ಲಕ್ಷಾಂತರ ರೂ ಮೌಲ್ಯದ ಸುಮಾರು 6 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ತ್ರಿಪುರ ಮೂಲದ ಸಚ್ಲಾಂಗ್ ದೆಬರ್ಮ(22) ಮತ್ತುಪ್ರಮೇಶ್ ದೆಬರ್ಮ(22) ಎಂದು ಗುರುತಿಸಲಾಗಿದೆ.
ಆರೋಪಿಗಳು ಗಾಂಜಾ ವನ್ನು ತಲಾ ಒಂದುವರೆ ಕೆಜಿಯಂತೆ ಪಾರ್ಸೆಲ್ ಮಾಡಿ ಸೂಟ್ಕೇಸ್ ನ ಒಳಗಡೆ ಪ್ಯಾಕ್ ಮಾಡಿ ಯಾರಿಗೂ ಅನುಮಾನ ಬಾರದಂತೆ ಬಚ್ಚಿಟ್ಟು ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಖಚಿತ ಮಾಹಿತಿಯಂತೆ ಮುಲ್ಕಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ರೈಲ್ವೆ ಸ್ಟೇಷನ್ ಮುಖಾಂತರ ಮಣಿಪಾಲಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಹೋಗುತ್ತಿದ್ದರು ಎಂಬ ಮಾಹಿತಿ ಇದ್ದು ಪೊಲೀಸರು ಆರೋಪಿಗಳ ಯತ್ನವನ್ನು ವಿಫಲಗೊಳಿಸಿದ್ದು ಗಾಂಜಾ ಮಾರಾಟಗಾರರ ಕಿಂಗ್ ಪಿನ್ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ
ಕಾರ್ಯಾಚರಣೆಯಲ್ಲಿ ಮುಲ್ಕಿ ಪೊಲೀಸ್ ಉಪನಿರೀಕ್ಷಕ ವಿನಾಯಕ ಬಾವಿಕಟ್ಟೆ, ಸಿಬ್ಬಂದಿಗಳಾದ ಸಂಜೀವ, ಚಂದ್ರಶೇಖರ್, ಅರುಣ್ ಕುಮಾರ್, ಸುರೇಂದ್ರ, ವೀರೇಶ್ ಭಾಗವಹಿಸಿದ್ದರು.

Advertisement

Share
Team Kundapur Times

Recent Posts

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

10 hours ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 month ago