ಕುಂದಾಪುರ:ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆಯನ್ನು ನೀಡಿರುವ ಸಂಸದರ ಸೇವೆ ಅಪಾರವಾದದ್ದು.ಜನಪರ ಕೆಲಸಗಳ ಮೂಲಕ ಕ್ಷೇತ್ರದಲ್ಲಿ ಜನಪ್ರೀತಿಗಳಿಸಿರುವ ಸಂಸದ ಬಿ.ವೈ ರಾಘವೇಂದ್ರ ಅವರ ಗೆಲುವು ನಿಶ್ಚಿತ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಸಂಸದ ಬಿ.ವೈ ರಾಘವೇಂದ್ರ ಅವರು ಮೂರು ಸಾವಿರ ಕೋಟಿ ಅನುದಾನ ಬೈಂದೂರು ಕ್ಷೇತ್ರಕ್ಕೆ ನೀಡಿದ್ದಾರೆ.ಬೈಂದೂರಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ಅವರನ್ನು ಕ್ಷೇತ್ರದ ಜನತೆ ಆಶೀರ್ವದಿಸಲಿದ್ದಾರೆ ಎಂದು ಶಾಸಕರು ಹೇಳಿದರು.ಸಮೃದ್ದ ನಡಿಗೆ ಮೂಲಕ ಹದಿನಾರು ದಿನಗಳ ಕಾರ್ಯಕ್ರಮ ಆಯೋಜಿಸಿಕೊಲ್ಳಾಗಿದೆ.ಚುನಾವಣೆಯ ಸಿದ್ದತೆ ನಡೆಯುತ್ತಿದ್ದು ಕಾರ್ಯಕರ್ತರು ಒಗ್ಗೂಟ್ಟಿನ ಕೆಲಸವನ್ನು ಮಾಡುವಲ್ಲಿ ಉತ್ಸುಕರಾಗಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರು ಸಣ್ಣಪುಣ್ಣ ರಾಜಕೀಯವನ್ನು ಇಟ್ಟುಕೊಂಡು ನಮ್ಮ ಪಕ್ಷದ ಕಾರ್ಯಕರ್ತರನ್ನು ಹೆಸದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ ಹೇರುತ್ತಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ.ಕಾರ್ಯಕರ್ತರಿಗೆ ತೊಂದರೆಯಾದರೆ ನೇರ ನಾಯಕರಿಗೆ ಸವಾಲೆಸೆಯಲು ಸಿದ್ದರಿದ್ದೇವೆ ಎಂದು ಶಾಸಕರು ಎಚ್ಚರಿಸಿದರು.ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ.ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ.ಸಂಘರ್ಷದ ರಾಜಕಾರಣವನ್ನು ಎಂದಿಗೂ ಸಹಿಸಲ್ಲ ಎಂದು ಹೇಳಿದರು.ತೊಂದರೆಯಾಗುವ ರಾಜಕೀಯ ಬೇಡ ಎನ್ನುವುದು ನನ್ನ ಆಶಯ.ಕಟ್ಟೆ ರಾಜಕೀಯಕ್ಕೆ ಕಿವಿ ಕೊಡಲ್ಲ.ಸಾಧನೆ ಮೂಲಕ ಬಿಜೆಪಿ ಗುರುತಿಸಿಕೊಳ್ಳಲಿದೆ ಎಂದರು.ಈ ಸಂದರ್ಭದಲ್ಲಿ
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಚುನಾವಣಾ ಉಸ್ತುವಾರಿಗಳಾದ ಬಾನು ಪ್ರಕಾಶ್ ಜೀ,ಬಿಜೆಪಿ ಮುಖಂಡರಾದ ಅಶೋಕ ಮೂರ್ತಿ,ಸದಾನಂದ ಉಪ್ಪಿನಕುದ್ರು,ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಮಹೇಂದ್ರ ಪೂಜಾರಿ,ಉಮೇಶ ಕಲ್ಗದ್ದೆ,ಬಂದೂರು ಬಿಜೆಪಿ ಮಂಡಲದ ಕೋಶಾಧಿಕಾರಿ ಗಣೇಶ ಗಾಣಿಗ ಉಪಸ್ಥಿತರಿದ್ದರು.
ವರದಿ-ಅಲ್ಪಾಜ್
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಈ ನಂಬರ್ ವಾಟ್ಸಪ್ ಮಾಡಿ-9141825696
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…