ಕುಂದಾಪುರ:ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಮಹತ್ತರವಾದ ಕೊಡುಗೆಯನ್ನು ನೀಡಿರುವ ಸಂಸದರ ಸೇವೆ ಅಪಾರವಾದದ್ದು.ಜನಪರ ಕೆಲಸಗಳ ಮೂಲಕ ಕ್ಷೇತ್ರದಲ್ಲಿ ಜನಪ್ರೀತಿಗಳಿಸಿರುವ ಸಂಸದ ಬಿ.ವೈ ರಾಘವೇಂದ್ರ ಅವರ ಗೆಲುವು ನಿಶ್ಚಿತ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಸಂಸದ ಬಿ.ವೈ ರಾಘವೇಂದ್ರ ಅವರು ಮೂರು ಸಾವಿರ ಕೋಟಿ ಅನುದಾನ ಬೈಂದೂರು ಕ್ಷೇತ್ರಕ್ಕೆ ನೀಡಿದ್ದಾರೆ.ಬೈಂದೂರಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ಅವರನ್ನು ಕ್ಷೇತ್ರದ ಜನತೆ ಆಶೀರ್ವದಿಸಲಿದ್ದಾರೆ ಎಂದು ಶಾಸಕರು ಹೇಳಿದರು.ಸಮೃದ್ದ ನಡಿಗೆ ಮೂಲಕ ಹದಿನಾರು ದಿನಗಳ ಕಾರ್ಯಕ್ರಮ ಆಯೋಜಿಸಿಕೊಲ್ಳಾಗಿದೆ.ಚುನಾವಣೆಯ ಸಿದ್ದತೆ ನಡೆಯುತ್ತಿದ್ದು ಕಾರ್ಯಕರ್ತರು ಒಗ್ಗೂಟ್ಟಿನ ಕೆಲಸವನ್ನು ಮಾಡುವಲ್ಲಿ ಉತ್ಸುಕರಾಗಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರು ಸಣ್ಣಪುಣ್ಣ ರಾಜಕೀಯವನ್ನು ಇಟ್ಟುಕೊಂಡು ನಮ್ಮ ಪಕ್ಷದ ಕಾರ್ಯಕರ್ತರನ್ನು ಹೆಸದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ ಹೇರುತ್ತಿರುವ ವಿಷಯ ನಮ್ಮ ಗಮನಕ್ಕೆ ಬಂದಿದೆ.ಕಾರ್ಯಕರ್ತರಿಗೆ ತೊಂದರೆಯಾದರೆ ನೇರ ನಾಯಕರಿಗೆ ಸವಾಲೆಸೆಯಲು ಸಿದ್ದರಿದ್ದೇವೆ ಎಂದು ಶಾಸಕರು ಎಚ್ಚರಿಸಿದರು.ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ.ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ.ಸಂಘರ್ಷದ ರಾಜಕಾರಣವನ್ನು ಎಂದಿಗೂ ಸಹಿಸಲ್ಲ ಎಂದು ಹೇಳಿದರು.ತೊಂದರೆಯಾಗುವ ರಾಜಕೀಯ ಬೇಡ ಎನ್ನುವುದು ನನ್ನ ಆಶಯ.ಕಟ್ಟೆ ರಾಜಕೀಯಕ್ಕೆ ಕಿವಿ ಕೊಡಲ್ಲ.ಸಾಧನೆ ಮೂಲಕ ಬಿಜೆಪಿ ಗುರುತಿಸಿಕೊಳ್ಳಲಿದೆ ಎಂದರು.ಈ ಸಂದರ್ಭದಲ್ಲಿ
ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಚುನಾವಣಾ ಉಸ್ತುವಾರಿಗಳಾದ ಬಾನು ಪ್ರಕಾಶ್ ಜೀ,ಬಿಜೆಪಿ ಮುಖಂಡರಾದ ಅಶೋಕ ಮೂರ್ತಿ,ಸದಾನಂದ ಉಪ್ಪಿನಕುದ್ರು,ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ,ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಮಹೇಂದ್ರ ಪೂಜಾರಿ,ಉಮೇಶ ಕಲ್ಗದ್ದೆ,ಬಂದೂರು ಬಿಜೆಪಿ ಮಂಡಲದ ಕೋಶಾಧಿಕಾರಿ ಗಣೇಶ ಗಾಣಿಗ ಉಪಸ್ಥಿತರಿದ್ದರು.
ವರದಿ-ಅಲ್ಪಾಜ್
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಈ ನಂಬರ್ ವಾಟ್ಸಪ್ ಮಾಡಿ-9141825696
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…