ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.
ನಾವುಂದ ಲಯನ್ಸ್ ಕ್ಲಬ್ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಕ್ಲಬ್ ಪ್ರಮುಖರಾದ ಮಹಮ್ಮದ್ ಹನಿಫ್,ಸಪ್ನಾ ಸುರೇಶ,ಏಕನಾಥ ಬೋಳಾರ್,ಝೊನ್ ಚೆರ್ಪರ್ಸನ್ ಜಗದೀಶ ಶೆಟ್ಟಿ ಕುದ್ರುಕೋಡು,ಬೋಜರಾಜ ಶೆಟ್ಟಿ,ನಾವುಂದ ಕ್ಲಬ್ಬಿನ ಕೋಶಾಧಿಕಾರಿ ರಮೇಶ ಮೊಗವೀರ,ಕಾರ್ಯದರ್ಶಿ ಅಶೋಕ ಆಚಾರ್ಯ,ನರಸಿಂಹ ದೇವಾಡಿಗ ಮತ್ತು ಸದಸ್ಯರು ಉಪಸ್ಥಿತರಿದ್ದರು.ಸೌಪರ್ಣಿಕಾ ತ್ರೈಮಾಸಿಕ ಬುಲೆಟಿನ್ ಬಿಡುಗಡೆ ಮಾಡಲಾಯಿತು.ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿರುವ ಆಲೂರು ಪ್ರೌಢಶಾಲೆ ವಿದ್ಯಾರ್ಥಿಗಳಾದ ಸಿಂಚನ ಶೆಟ್ಟಿ,ಗಿರಿಷ್ಮಾ,ಪ್ರಜ್ಞಾ ಹಾಗೂ ಆಯುರ್ವೇದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೆ ಸ್ಥಾನ ಪಡೆದ ರಶ್ಮಿ.ಆರ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.ಡಾ.ಮಹಮ್ಮದ್ ಹನಿಫ್ ಅವರು ನಾವುಂದ ಕೋಯಾನಗರ ಶಾಲಾ ಅಭಿವೃದ್ಧಿಗೆ 25,000.ರೂ ಅನುದಾನದ ಚೆಕ್ ನೀಡಿದರು.ಪ್ರದೀಪ್ ಶೆಟ್ಟಿ ಸ್ವಾಗತಿಸಿದರು.ಶಶಿಧರ ಶೆಟ್ಟಿ ನಿರೂಪಿಸಿದರು,ಅಶೋಕ ಆಚಾರ್ಯ ವರದಿ ವಾಚಿಸಿದರು.ಸುಮಾರು 1.65 ಲಕ್ಷ.ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಗುಲಾಬಿ ಶೆಟ್ಟಿ ಅವರು ಉದ್ಘಾಟಿಸಿದರು.ಅವರನ್ನು ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಈ ನಂಬರ್ಗೆ ವಾಟ್ಸ್ಆಪ್ ಮಾಡಿ-9141825696
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…