ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.
ನಾವುಂದ ಲಯನ್ಸ್ ಕ್ಲಬ್ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಕ್ಲಬ್ ಪ್ರಮುಖರಾದ ಮಹಮ್ಮದ್ ಹನಿಫ್,ಸಪ್ನಾ ಸುರೇಶ,ಏಕನಾಥ ಬೋಳಾರ್,ಝೊನ್ ಚೆರ್ಪರ್ಸನ್ ಜಗದೀಶ ಶೆಟ್ಟಿ ಕುದ್ರುಕೋಡು,ಬೋಜರಾಜ ಶೆಟ್ಟಿ,ನಾವುಂದ ಕ್ಲಬ್ಬಿನ ಕೋಶಾಧಿಕಾರಿ ರಮೇಶ ಮೊಗವೀರ,ಕಾರ್ಯದರ್ಶಿ ಅಶೋಕ ಆಚಾರ್ಯ,ನರಸಿಂಹ ದೇವಾಡಿಗ ಮತ್ತು ಸದಸ್ಯರು ಉಪಸ್ಥಿತರಿದ್ದರು.ಸೌಪರ್ಣಿಕಾ ತ್ರೈಮಾಸಿಕ ಬುಲೆಟಿನ್ ಬಿಡುಗಡೆ ಮಾಡಲಾಯಿತು.ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿರುವ ಆಲೂರು ಪ್ರೌಢಶಾಲೆ ವಿದ್ಯಾರ್ಥಿಗಳಾದ ಸಿಂಚನ ಶೆಟ್ಟಿ,ಗಿರಿಷ್ಮಾ,ಪ್ರಜ್ಞಾ ಹಾಗೂ ಆಯುರ್ವೇದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೆ ಸ್ಥಾನ ಪಡೆದ ರಶ್ಮಿ.ಆರ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.ಡಾ.ಮಹಮ್ಮದ್ ಹನಿಫ್ ಅವರು ನಾವುಂದ ಕೋಯಾನಗರ ಶಾಲಾ ಅಭಿವೃದ್ಧಿಗೆ 25,000.ರೂ ಅನುದಾನದ ಚೆಕ್ ನೀಡಿದರು.ಪ್ರದೀಪ್ ಶೆಟ್ಟಿ ಸ್ವಾಗತಿಸಿದರು.ಶಶಿಧರ ಶೆಟ್ಟಿ ನಿರೂಪಿಸಿದರು,ಅಶೋಕ ಆಚಾರ್ಯ ವರದಿ ವಾಚಿಸಿದರು.ಸುಮಾರು 1.65 ಲಕ್ಷ.ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಗುಲಾಬಿ ಶೆಟ್ಟಿ ಅವರು ಉದ್ಘಾಟಿಸಿದರು.ಅವರನ್ನು ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಈ ನಂಬರ್ಗೆ ವಾಟ್ಸ್ಆಪ್ ಮಾಡಿ-9141825696
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…