ಕುಂದಾಪುರ

ಲಯನ್ಸ್ ಜಿಲ್ಲಾ ಗರ್ವನರ್ ಭೇಟಿ,ಸಾಧಕರಿಗೆ ಸನ್ಮಾನ

Share

ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.
ನಾವುಂದ ಲಯನ್ಸ್ ಕ್ಲಬ್‍ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಕ್ಲಬ್ ಪ್ರಮುಖರಾದ ಮಹಮ್ಮದ್ ಹನಿಫ್,ಸಪ್ನಾ ಸುರೇಶ,ಏಕನಾಥ ಬೋಳಾರ್,ಝೊನ್ ಚೆರ್‍ಪರ್ಸನ್ ಜಗದೀಶ ಶೆಟ್ಟಿ ಕುದ್ರುಕೋಡು,ಬೋಜರಾಜ ಶೆಟ್ಟಿ,ನಾವುಂದ ಕ್ಲಬ್ಬಿನ ಕೋಶಾಧಿಕಾರಿ ರಮೇಶ ಮೊಗವೀರ,ಕಾರ್ಯದರ್ಶಿ ಅಶೋಕ ಆಚಾರ್ಯ,ನರಸಿಂಹ ದೇವಾಡಿಗ ಮತ್ತು ಸದಸ್ಯರು ಉಪಸ್ಥಿತರಿದ್ದರು.ಸೌಪರ್ಣಿಕಾ ತ್ರೈಮಾಸಿಕ ಬುಲೆಟಿನ್ ಬಿಡುಗಡೆ ಮಾಡಲಾಯಿತು.ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿರುವ ಆಲೂರು ಪ್ರೌಢಶಾಲೆ ವಿದ್ಯಾರ್ಥಿಗಳಾದ ಸಿಂಚನ ಶೆಟ್ಟಿ,ಗಿರಿಷ್ಮಾ,ಪ್ರಜ್ಞಾ ಹಾಗೂ ಆಯುರ್ವೇದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೆ ಸ್ಥಾನ ಪಡೆದ ರಶ್ಮಿ.ಆರ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.ಡಾ.ಮಹಮ್ಮದ್ ಹನಿಫ್ ಅವರು ನಾವುಂದ ಕೋಯಾನಗರ ಶಾಲಾ ಅಭಿವೃದ್ಧಿಗೆ 25,000.ರೂ ಅನುದಾನದ ಚೆಕ್ ನೀಡಿದರು.ಪ್ರದೀಪ್ ಶೆಟ್ಟಿ ಸ್ವಾಗತಿಸಿದರು.ಶಶಿಧರ ಶೆಟ್ಟಿ ನಿರೂಪಿಸಿದರು,ಅಶೋಕ ಆಚಾರ್ಯ ವರದಿ ವಾಚಿಸಿದರು.ಸುಮಾರು 1.65 ಲಕ್ಷ.ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾವುಂದ ನಾಗಯ್ಯ ಶೆಟ್ಟಿ ಪ್ರಯಾಣಿಕರ ತಂಗುದಾಣವನ್ನು ಗುಲಾಬಿ ಶೆಟ್ಟಿ ಅವರು ಉದ್ಘಾಟಿಸಿದರು.ಅವರನ್ನು ನಾವುಂದ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಪ್ರಕಟಿಸಲು ಈ ನಂಬರ್‍ಗೆ ವಾಟ್ಸ್‍ಆಪ್ ಮಾಡಿ-9141825696

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago