ಕುಂದಾಪುರ

ರಾಷ್ಟ್ರ ಭಕ್ತರು ಮತ್ತು ಹಣವಂತರ ನಡುವೆ ನಡೆಯುವ ಚುನಾವಣೆ, ಬೈಂದೂರುನಲ್ಲಿ ಈಶ್ವರಪ್ಪ ಶಕ್ತಿ ಪ್ರದರ್ಶನ

Share

ಕುಂದಾಪುರ:ಕುಟುಂಬ ರಾಜಕಾರಣವನ್ನು ಹೊಗಲಾಡಿಸುವ ಉದ್ದೇಶದಿಂದ ಹಾಗೂ ಪಕ್ಷದ ಆಂತರಿಕ ಸಮಸ್ಯೆಗಳನ್ನು ಶುದ್ಧಿಕರಣ ಮಾಡುವ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.
ಬೈಂದೂರು ತಾಲೂಕಿನ ಉಪ್ಪುಂದ ಪರಿಚಯ ಹೋಟೆಲ್‍ನಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಇದು ರಾಷ್ಟ್ರಭಕ್ತರು ಮತ್ತು ಹಣವಂತರ ನಡುವೆ ನಡೆಯುವ ಚುನಾವಣೆ ಇದಾಗಿದೆ.ಬೈಂದೂರು ಹಿಂದುತ್ವ ನೆಲೆಯನ್ನು ಹೊಂದಿರುವ ಕ್ಷೇತ್ರವಾಗಿದೆ, ಪ್ರತಿಯೊಂದು ಬೂತ್‍ನಲ್ಲಿ ಹಿಂದೂ ಕಾರ್ಯಕರ್ತರಿದ್ದಾರೆ.ಕಾರ್ಯಕರ್ತರು ಶ್ರಮಿಸಿದರೆ ನಮ್ಮ ಗೆಲುವ ನಿಶ್ಚಿತವಾಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.ರಾಘವೇಂದ್ರ ಅವರಿಂದ ಹಿಂದು ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಇವೊಂದು ಚುನಾವಣೆ ನೆರವಾಗಿ ರಾಷ್ಟ್ರ ಭಕ್ತರು ಕುಟುಂಬ ರಾಜಕಾರಣವನ್ನು ಮಾಡುವವರ ವಿರುದ್ಧವಾಗಿದೆ ಎಂದರು.ಮೋದಿಜಿ ಮತ್ತು ಅಮಿತ್ ಶಾ ಅವರ ಗುರಿ ಕೂಡ ಕುಟುಂಬ ರಾಜಕಾರಣವನ್ನು ಹೊಗಲಾಡಿಸುವುದು ಆಗಿದೆ ಅವರ ಆಶೀರ್ವಾದ ನನ್ನ ಮೇಲೆ ಇದೆ ಎಂದು ಹೇಳಿದರು.
ಹಿಂದುತ್ವಕ್ಕೆ ಯಾರಾದರೂ ಅಪಮಾನ ಮಾಡಿದರೆ ಎಂದಿಗೂ ನಾನು ಸಹಿಸುವುದಿಲ್ಲ,ಹಿಂದು ಸಂಘಟನೆಗಳು ನ್ಯಾಯದ ಪರವಾಗಿ ಕೆಲಸವನ್ನು ಮಾಡುತ್ತಿದ್ದಾರೆ ಹಿಂದು ಸಂಘಟನೆಯ ಕಾರ್ಯಕರ್ತರಿಗೆ ಅನ್ಯಾಯವಾದರೆ ಎಂದಿಗೂ ಸಹಿಸುವ ಪ್ರಶ್ನೆ ಎಲ್ಲಾ ಕಾರ್ಯಕರ್ತರ ಕಾವಲಿಗೆ ಸದಾ ನಾನು ಇರಲಿದ್ದೇನೆ ಎಂದು ಹಿಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.
ಬಿಜೆಪಿ ಪಕ್ಷವನ್ನು ಕುಟುಂಬ ರಾಜಕಾರಣದಿಂದ ರಕ್ಷಿಸಲು ಹಾಗೂ ಪಕ್ಷವನ್ನು ಸಂಪೂರ್ಣವಾಗಿ ಶುದ್ಧಿಕರಣ ಮಾಡಲು ನನಗೆ ಮತವನ್ನು ನೀಡಬೇಕೆಂದು ಕೇಳಿಕೊಂಡರು.ತಾನು ಎಂದಿಗೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ ಯಡಿಯೂರಪ್ಪ ಅವರಂತೆ ನಾನು ಮಾತೃ ಪಕ್ಷಕ್ಕೆ ದ್ರೊಹವನ್ನು ಬಗೆಯಲಾರೆ ಎಂದು ಹೇಳಿದರು.
ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ ಪಕ್ಷ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸಿ ಕಳೆದ ಚುನಾವಣೆಯಲ್ಲಿ ಪಕ್ಷದ ಮುಖಂಡರ ಮಾತಿಗೆ ಚಕಾರವೆತ್ತದೆ ರಾಜಕೀಯ ನಿವೃತ್ತಿ ಘೋಷಿಸಿದೆ.ಈ ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ಹಾವೇರಿಯಿಂದ ಟಿಕೆಟ್ ಕೇಳಿದ್ದೆ ಆದರೆ ಯಡಿಯೂರಪ್ಪ ಕೇವಲ ತನ್ನ ಕುಟುಂಬದ ಮಮತೆಯಿಂದ ಹಿಂದುಳಿದ ನಾಯಕ ಬೆಳೆಯಬಾರದೇನ್ನುವ ಉದ್ದೇಶದಿಂದ ಹೊಂದಾಣಿಕೆಯ ರಾಜಕೀಯ ಮಾಡಿಕೊಂಡಿದ್ದಾರೆ ಶೋಭಾ ಕರಂದ್ಲಾಜೆಗೆ ಚಿಕ್ಕಮಂಗಳೂರಿನ ಜನ ಗೋ ಬ್ಯಾಕ್ ಶೋಭಾ ಎಂದಾಗ ಬದಲಿ ಕ್ಷೇತ್ರ ಒದಗಿಸುವ ಇವರು ತಮ್ಮ ಮಕ್ಕಳ ಮಮತೆಯಲ್ಲಿ ನನಗೆ ಅನ್ಯಾಯ ಮಾಡಿದ್ದಾರೆ ನಾನು ಹಿಂದುತ್ವವನ್ನು ಉಸಿರಾಗಿಸಿಕೊಂಡ ರಾಜಕಾರಣಿ ಈ ಚುನಾವಣೆಯಲ್ಲಿ ಹಿಂದುತ್ವ ದೇಶ ಅಭಿವೃದ್ಧಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕುರಿತು ಜನ ಸ್ಪಷ್ಟ ಫಲಿತಾಂಶ ನೀಡಲಿದ್ದಾರೆ.ಯಾವ ಒತ್ತಡಗಳಿಗೂ ಮಣಿಯಲಾರೆ.ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ ಎಂದು ಈಶ್ವರಪ್ಪ ಹೇಳಿದರು.
ರಾಷ್ಟ್ರ ಭಕ್ತ ಹೆಸರಿನಲ್ಲಿ ಮತಯಾಚನೆ:ಯಡಿಯೂರಪ್ಪ ವಿರುದ್ದ ಬಂಡಾಯ ಸಾರಿದ ಈಶ್ವರಪ್ಪ ಬಣಕ್ಕೆ ಬೈಂದೂರಿನಲ್ಲಿ ಜನಬೆಂಬಲ ದೊರೆಯದೇನ್ನುವ ಬಿಜೆಪಿಯವರ ಚಿಂತನೆಗೆ ಬಾನುವಾರದ ಸಮಾವೇಶ ಶಾಕ್ ಕೊಟ್ಟಿದೆ.ಕ್ಕಿಕ್ಕಿರಿದು ಸೇರಿದ ಕಾರ್ಯಕರ್ತರ ದಂಡು ಹಾಗೂ ಅಪಾರ ಜನಸ್ತೋಮ ಈಶ್ವರಪ್ಪ ಬಳಗದ ಹುಮ್ಮಸ್ಸು ಹೆಚ್ಚಿಸಿದೆ.ಬಿಜೆಪಿ ಹಾಗೂ ಸಂಘ ಪರಿವಾರದ ಬಹುತೇಕ ಕಾರ್ಯಕರ್ತರು ಈಶ್ವರಪ್ಪ ಸಮಾವೇಶದ ಜವಬ್ದಾರಿ ವಹಿಸಿಕೊಂಡಿದ್ದರು.ದೇಶಕ್ಕೆ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಹಿಂದುತ್ವದ ನಾಯಕ ಈಶ್ವರಪ್ಪ ಎನ್ನುವ ಪರಿಕಲ್ಪನೆಯಲ್ಲಿ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿತ್ತು.ರಾಷ್ಟ್ರ ಭಕ್ತ ಎಂಬ ಹೆಸರಿನಲ್ಲಿ ಈಶ್ವರಪ್ಪನವರು ಮತವನ್ನು ಯಾಚಿಸಿದರು.
ವೇದಿಕೆಯಲ್ಲಿ ಕಾಂತೇಶ್ ಈಶ್ವರಪ್ಪ, ಸಂಘಟಕ ಶ್ರೀಧರ ಬಿಜೂರು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ಗೋಪಾಲಕೃಷ್ಣ ನಾಡ, ತಾಲೂಕು ಪಂಚಾಯತ್ ಮಾಜಿ ಸದಸ್ಯ ನಾರಾಯಣ ಗುಜ್ಜಾಡಿ, ಗೋಪಾಲಗಾಣಿಗ ಬೈಂದೂರು, ಸುವರ್ಣ ಪೂಜಾರಿ ಬಿಜೂರು, ಹಿಂದೂ ಜಾಗರಣೆಯ ಅಧ್ಯಕ್ಷ ಯಶವಂತ ಗಂಗೊಳ್ಳಿ, ವಿನಯ್ ನಾಯರಿ ನಾವುಂದ , ಮಂಜುನಾಥ ರಾವ್ ಬೈಂದೂರು, ಗಣೇಶ್ ಬೈಂದೂರು ಇನ್ನಿತರರು ಉಪಸ್ಥಿತರಿದ್ದರು.
ಶ್ರೀಧರ್ ಬಿಜೂರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಗೋಪಾಲಕೃಷ್ಣ ನಾಡ ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago