ಉಡುಪಿ:ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣದ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್(35) ಅವರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಜ್ಯೋತಿ ಅವರ ಕೊಠಡಿಯಲ್ಲಿ ಒಂದು ಡೈರಿ ಸಿಕ್ಕಿದ್ದು ಅದರಲ್ಲಿ ಆಕೆ ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದುಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೊಲೀಸರಿಗೆ ದೂರು ನೀಡಿದ್ದು ಆ ಹಿನ್ನಲೆಯಲ್ಲಿ ಪೊಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.
ಬಾಗಲಕೋಟೆ ಮೂಲದ ರವಿ ಕುಮಾರ್ ಕೆಎಸ್ ಆರ್ ಟಿಸಿಯಲ್ಲಿ ಮ್ಯೆಕ್ಯಾನಿಕ್ ಆಗಿದ್ದು ಕಾಪು ಠಾಣೆಗೆ ಹೊಂದಿಕೊಂಡಿರುವ ಪೊಲೀಸ್ ಕ್ವಾಟ್ರಸ್ ನಲ್ಲಿ ತಮ್ಮ ಪತ್ನಿಯೊಂದಿಗೆ ವಾಸವಿದ್ದರು.
ಪತಿಪತ್ನಿಯ ನಡುವೆ ಆಗಾಗ ಜಗಳವಾಗುತ್ತಿದ್ದು ಇದರಿಂದ ಮನನೊಂದು ಮಹಿಳಾ ಸಿಬಂದಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…