ಕುಂದಾಪುರ:ಅಶಕ್ತರ ಬಾಳಿಗೆ ನೆರವಾಗುವ ದೃಷ್ಟಿಯಿಂದ ಸೂರನ್ನು ಕಟ್ಟಿಸಿಕೊಟ್ಟಿರುವುದು ಬಹಳಷ್ಟು ಉತ್ತಮವಾದ ಕೆಲಸವಾಗಿದೆ.ಮಾನವ ಜನಾಂಗ ಒಂದೆ ಎನ್ನುವ ಮನೋಭಾವದಿಂದ ಬಾಳಿದರೆ ಮಾತ್ರ ಸಮಾಜದಲ್ಲಿನ ಅಸಾಮತೋಲನವನ್ನು ಹೊಗಲಾಡಿಸಬಹುದು ಎಂದು ಪತ್ರಕರ್ತ ಅರುಣ್ ಕುಮಾರ್ ಶಿರೂರು ಹೇಳಿದರು.
ಬಾಂಧವ್ಯ ಫೌಂಡೇಶನ್ ನೆರಳು ಯೋಜನೆ ವತಿಯಿಂದ ಬೈಂದೂರು ತಾಲೂಕಿನ ಮರವಂತೆಯಲ್ಲಿ ನಿರ್ಮಿಸಿದ ನೆರಳು 11ನೇ ಮನೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಂಧವ್ಯ ಫೌಂಡೇಶನ್ ಸ್ಥಾಪಕಾಧ್ಯಕ್ಷ ದಿನೇಶ್ ಬಾಂಧವ್ಯ ಅವರು ಫಲಾನುಭವಿ ತುಂಗ ಪೂಜಾರಿ ಅವರಿಗೆ ಮನೆಯ ಕೀ ಹಸ್ತಾಂತರಿಸಿದರು.
ಝೀ ಕನ್ನಡ ಸರಿಗಮಪ ಚಾಂಪಿಯನ್ ಯಶವಂತ್ ಎಮ್.ಜಿ,ಉಡುಪಿ ಟೌನ್ ಆರಕ್ಷಕ ಠಾಣೆಯ ಜಯಕರ ಐರೋಡಿ,ಕಳಿಬೈಲು ಕೊರಗಜ್ಜ ದೇವಸ್ಥಾನದ ಪ್ರಧಾನ ಅರ್ಚಕ ಅಭಿಜಿತ್ ಪಾಂಡೇಶ್ವರ,ಆನಂದ ಯಾದವ ತಿಪಟೂರು,ನಾಗರಾಜ ಆಚಾರ್ಯ,ಜೀವರಕ್ಷಕ ದಳದ ಚೇತನ್,ನಾಗೇಶ ಪೂಜಾರಿ ಯಳಜಿತ್ ಉಪಸ್ಥಿತರಿದ್ದರು.ಅಮೃತ ಹಸ್ತ ತಂಡ ಬೆಂಗಳೂರು,ಕ್ಲೀನ್ ತ್ರಾಸಿ ತಂಡ ಮರವಂತೆ,ಟೀಮ್ ಕುಂದಾಪುರಿಯನ್ಸ್ ಹಾಗೂ ಝೀ ಕನ್ನಡ ಸರಿಗಮಪ ಚಾಂಪಿಯನ್ ಯಶವಂತ್ ಎಮ್.ಜಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದಿನೇಶ ಬಾಂಧವ್ಯ ಸ್ವಾಗತಿಸಿ,ಪ್ರಾಸ್ತಾವಿಕ ಮಾತುಗಳನ್ನಾಡಿದರು.ಡಾ.ಜ್ಯೋತಿ ಸಾಮಂತ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…