ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,
ಶ್ರೀ ಗಣಪತಿ,ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಏಪ್ರಿಲ್ 04 ರಿಂದ ಏಪ್ರಿಲ್ 05 ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್.04 ರಂದು ಗುರುವಾರ ಬ್ರಹ್ಮಕಲಶೋತ್ಸವ ವೈದಿಕ ವಿಧಾನ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ.
ಏಪ್ರಿಲ್ 05 ರಂದು ಶುಕ್ರವಾರ ಶ್ರೀರಾಮ, ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ವೇದ ಮೂರ್ತಿ ಡಾ.ಭರತ್ ಐತಾಳ್ ಉಳ್ಳೂರು 11 ಅವರ ನೇತೃತ್ವದಲ್ಲಿ ಜರುಗಲಿದೆ.ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದೆ.
ಏಪ್ರಿಲ್ 06 ರಂದು ಶನಿವಾರ ಬ್ರಹ್ಮ ಕಲಶಾಭಿಷೇಕ,ಮಹಾ ಪೂಜೆ, ತೀರ್ಥ ಪ್ರಸಾದ ವಿತರಣೆ,ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿದೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ.
ಸುಧಾಕರ ಆಚಾರ್ಯ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ದೇವತಾ ಕಾರ್ಯದಲ್ಲಿ ಊರ ಪರವೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗ ಬೇಕು ಎಂದು ಹೇಳಿದರು.
ರವಿ ಶೆಟ್ಟಿಗಾರ್ ತ್ರಾಸಿ ಮಾತನಾಡಿ,ಶ್ರೀರಾಮ ಶ್ರೀ ಗಣಪತಿ , ಶ್ರೀ ಅಯ್ಯಪ್ಪ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಏಪ್ರಿಲ್ 4 ರಿಂದ ಏಪ್ರಿಲ್ 6 ರಿಂದ ಅದ್ದೂರಿಯಾಗಿ ನಡೆಯಲಿದೆ ಎಂದರು,ಇವೊಂದು ದೇವತಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಹೇಳಿದರು.
ತಮ್ಮಯ್ಯ ದೇವಾಡಿಗ ಮಾತನಾಡಿ,ಶ್ರೀರಾಮ ಶ್ರೀ ಗಣಪತಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಮ್ಮ ಊರ ಹಬ್ಬದಂತೆ ಆಚರಿಸಲಾಗುತ್ತಿದೆ.ಎಲ್ಲರೂ ಸಡಗರ ಸಂಭ್ರಮದಿಂದ ಭಾಗವಹಿಸಬೇಕೆಂದು ವಿನಂತಿಸಿಕೊಂಡರು.
ಉದಯ ಶೆಟ್ಟಿ ಮಾತನಾಡಿ, ದೇವತಾ ಮತ್ತು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗದಲ್ಲಿ ಎಲ್ಲರೂ ಭಾಗವಹಿಸಬೇಕೆಂದರು.ಈ ಸಂದರ್ಭದಲ್ಲಿ ಸಮಿತಿ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…