ಕುಂದಾಪುರ:ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮೀ ಎಂಬುವವರ ಮನೆಯ ಗೋಡ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 44 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ.
ಕಳವಾದ ಒಟ್ಟು ಚಿನ್ನಾಭರಣಗಳ ಮೌಲ್ಯ ಸುಮಾರು 1,46,000/- ರೂಗಳಾಗಬಹುದು. ಎಂಬುವುದಾಗಿ ಠಾಣೆಗೆ ನೀಡಿದ ದೂರಿನಂತೆ ದಾಖಲಾಗಿದೆ.
ಪ್ರಕರಣದಲ್ಲಿನ ಆರೋಪಿ ಪತ್ತೆ ಬಗ್ಗೆ ಸ್ಥಳಿಯ ಬಾತ್ಮೀದಾರರ ಮಾಹಿತಿ ಕಲೆಹಾಕಿ,
ಕುಂದಾಪುರ ಕೋಣಿ ಗ್ರಾಮದ ನಿವಾಸಿ ಆರೋಪಿಯಾದ ವಿಜಯ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿ ಕಳವಾದ ಒಟ್ಟು 44 ಗ್ರಾಂ ತೂಕದ (ಸುಮಾರು 2,64,000ರ ಮೌಲ್ಯದ) ಚಿನ್ನಾಭರಣಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಸದ್ರಿ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕುಂದಾಪುರ ಪೊಲೀಸ್ ಠಾಣೆಯ ಪಿಐ ಯು ಬಿ ನಂದಕುಮಾರ,ಪಿ.ಎಸ್.ಐ ವಿನಯ ಕೊರ್ಲಹಳ್ಳಿ, ಪಿ.ಎಸ್.ಐ ಪ್ರಸಾದ ಕುಮಾರ್.ಕೆ ಹಾಗೂ ಸಿಬ್ಬಂದಿಯವರಾದ ಸಂತೋಷ ಕುಮಾರ್,ಶ್ರೀಧರ್,ರಾಮ ಪೂಜಾರಿ ಅವರು ವರು ಸದ್ರಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…