ಕುಂದಾಪುರ:ಕುಂದಾಪುರ ತಾಲೂಕಿನ ಕೋಣಿ ಗ್ರಾಮದ ನಿವಾಸಿಯಾಗಿರುವ ಲಕ್ಷ್ಮೀ ಎಂಬುವವರ ಮನೆಯ ಗೋಡ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 44 ಗ್ರಾಂ ತೂಕದ ಚಿನ್ನಾಭರಣವನ್ನು ಕಳವು ಗೈದಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ.
ಕಳವಾದ ಒಟ್ಟು ಚಿನ್ನಾಭರಣಗಳ ಮೌಲ್ಯ ಸುಮಾರು 1,46,000/- ರೂಗಳಾಗಬಹುದು. ಎಂಬುವುದಾಗಿ ಠಾಣೆಗೆ ನೀಡಿದ ದೂರಿನಂತೆ ದಾಖಲಾಗಿದೆ.
ಪ್ರಕರಣದಲ್ಲಿನ ಆರೋಪಿ ಪತ್ತೆ ಬಗ್ಗೆ ಸ್ಥಳಿಯ ಬಾತ್ಮೀದಾರರ ಮಾಹಿತಿ ಕಲೆಹಾಕಿ,
ಕುಂದಾಪುರ ಕೋಣಿ ಗ್ರಾಮದ ನಿವಾಸಿ ಆರೋಪಿಯಾದ ವಿಜಯ ಎಂಬಾತನನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿ ಕಳವಾದ ಒಟ್ಟು 44 ಗ್ರಾಂ ತೂಕದ (ಸುಮಾರು 2,64,000ರ ಮೌಲ್ಯದ) ಚಿನ್ನಾಭರಣಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಸದ್ರಿ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕುಂದಾಪುರ ಪೊಲೀಸ್ ಠಾಣೆಯ ಪಿಐ ಯು ಬಿ ನಂದಕುಮಾರ,ಪಿ.ಎಸ್.ಐ ವಿನಯ ಕೊರ್ಲಹಳ್ಳಿ, ಪಿ.ಎಸ್.ಐ ಪ್ರಸಾದ ಕುಮಾರ್.ಕೆ ಹಾಗೂ ಸಿಬ್ಬಂದಿಯವರಾದ ಸಂತೋಷ ಕುಮಾರ್,ಶ್ರೀಧರ್,ರಾಮ ಪೂಜಾರಿ ಅವರು ವರು ಸದ್ರಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…