ಕುಂದಾಪುರ

ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ:ಗೀತಾ ಶಿವರಾಜ್ ಕುಮಾರ್

Share

ಬೈಂದೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬ ನಾಗರೀಕರೂ ಕೂಡ ಸರ್ಕಾರದ ಪಾಲುದಾರು,ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ಬೈಂದೂರು ತಾಲ್ಲೂಕಿನ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳ ಪೂರೈಸಲು ಮಾಸಿಕ ₹50 ಲಕ್ಷ ಹಣ ಖರ್ಚಾಗುತ್ತಿದೆ.ಇಲ್ಲಿ ವಾರ್ಷಿಕ ₹6 ಕೋಟಿ ಹಣ ವ್ಯಯಿಸಬೇಕು.ಬಡವರಿಗೆ ನೆರವಾಗಬಲ್ಲ ಗ್ಯಾರಂಟಿ ಯೋಜನೆ ಕರ್ನಾಟಕ ರಾಜ್ಯ ಬಿಟ್ಟರೆ ದೇಶದ ಯಾವ ರಾಜ್ಯದಲ್ಲೂ ಇಂತಹ ಯೋಜನೆ ಇಲ್ಲ ಎಂದರು.

ರಾಜ್ಯದಲ್ಲಿ ₹58 ಸಾವಿರ ಕೋಟಿ ಹಣದ ಹೊರೆ ಸರ್ಕಾರಕ್ಕೆ ಆಗುತ್ತಿದೆ.ಆದರೂ, ಈ ಬಗ್ಗೆ ಯಾವುದೇ,ಒಳ ಒಪ್ಪಂದಕ್ಕೆ ಸರ್ಕಾರ ಸಿದ್ದವಿಲ್ಲ.ಜನ ಸಾಮಾನ್ಯರ ತೆರಿಗೆ ಹಣವನ್ನು ಪುನಃ ಜನರಿಗೆ ತಲುಪಿಸಲಾಗುತ್ತಿದೆ ಎನ್ನುವ ಸಂತಸ ಸರ್ಕಾರಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ತಮ್ಮ ಬದುಕಿನುದ್ದಕ್ಕೂ ಸಹ ಬಡವರು,ದಲಿತರು,ಶೋಷಿತ ವರ್ಗದವರ ಪರವಾಗಿಯೇ ಚಿಂತಿಸುತ್ತಿದ್ದರು.ಅಂದು, ಬಂಗಾರಪ್ಪ ಅವರು ಜನ ಸಾಮಾನ್ಯರಿಗೆ ನೀಡಿದ ಸೇವೆ, ಇಂದಿಗೂ ಜೀವಂತವಾಗಿವೆ ಎಂದರು.

ಬಂಗಾರಪ್ಪ ಅವರ,ಆರಾಧನ, ಗ್ರಾಮೀಣ ಕೃಪಾಂಕ,ಆಶ್ರಯ ಮತ್ತು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಬಡವರಿಗೆ ಬದುಕಲು ನೆಲೆ ಕಲ್ಪಿಸಿಕೊಟ್ಟಿವೆ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಬಿಜೆಪಿ ಆಡಳಿತದಿಂದ ಜನ ಸಾಮಾನ್ಯರು ಬದುಕು ನಡೇಸುವುದೇ ಶೋಚನೀಯ ಸ್ಥಿತಿಗೆ ತಲುಪಿದೆ ಎಂದರು.

ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ,ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಲತಾಯಿ ಧೋರಣೆ ತೋರಿದ್ದಾರೆ.ಅಧಿಕಾರದ ಗದ್ದಿಗೆ ಏರಿ 15 ವರ್ಷ ಕಳೆದವು.ಆದರೆ,ಕ್ಷೇತ್ರ ಮಾತ್ರ ಕತ್ತಲಲ್ಲಿ ಮುಳುಗಿದೆ ಎಂದು ದೂರಿದರು.
ಡಾ.ಶಿವರಾಜ್ ಕುಮಾರ್ ಮಾತನಾಡಿ,ಚಿಕ್ಕ ವಯಸ್ಸಿನಿಂದ ಪತ್ನಿ ಗೀತಾ ಅವರು ಬಂಗಾರಪ್ಪ ಅವರ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾರೆ.ಬಂಗಾರಪ್ಪ ಅವರು, ಎಲ್ಲಾ ಧರ್ಮ, ಸಮುದಾಯಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅದೇ ಗುಣ ಗೀತಾ ಅವರಿಗೆ ಬಂದಿದೆ.ಜಿಲ್ಲೆಯಲ್ಲಿ ಬಂಗಾರಪ್ಪ ಅವರ ಋಣ ತೀರಿಸಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕೇಳಿಕೊಂಡರು.

ಪ್ರಮುಖರಾದ ರಾಜು ಪೂಜಾರಿ,ಪ್ರದೀಪ್ ಕುಮಾರ್ ಶೆಟ್ಟಿ,ಅರವಿಂದ ಪೂಜಾರಿ, ಹರೀಶ್ ಕೊಡಪಾಡಿ, ಚಂದ್ರ ಶೇಖರ ಪೂಜಾರಿ,ಮಂಜುಳ ದೇವಾಡಿಗ ಸೇರಿ, ರಾಜು ದೇವಾಡಿಗ,ಅನಂತ ಮೊವಾಡಿ ಮತ್ತಿತರರು ಉಪಸ್ಥಿತರಿದ್ದರು.
ಅನಂತ ಮೊವಾಡಿ ಸ್ವಾಗತಿಸಿ.ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago