ಕುಂದಾಪುರ

ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ:ಗೀತಾ ಶಿವರಾಜ್ ಕುಮಾರ್

Share

Advertisement
Advertisement

ಬೈಂದೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಸವಲತ್ತು ಪಡೆಯುವ ಪ್ರತಿಯೊಬ್ಬ ನಾಗರೀಕರೂ ಕೂಡ ಸರ್ಕಾರದ ಪಾಲುದಾರು,ಗ್ಯಾರಂಟಿ ಯೋಜನೆಯಿಂದ ಬಡವರಿಗೆ ಒಳಿತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

Advertisement

ಬೈಂದೂರು ತಾಲ್ಲೂಕಿನ ತ್ರಾಸಿ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆಗಳ ಪೂರೈಸಲು ಮಾಸಿಕ ₹50 ಲಕ್ಷ ಹಣ ಖರ್ಚಾಗುತ್ತಿದೆ.ಇಲ್ಲಿ ವಾರ್ಷಿಕ ₹6 ಕೋಟಿ ಹಣ ವ್ಯಯಿಸಬೇಕು.ಬಡವರಿಗೆ ನೆರವಾಗಬಲ್ಲ ಗ್ಯಾರಂಟಿ ಯೋಜನೆ ಕರ್ನಾಟಕ ರಾಜ್ಯ ಬಿಟ್ಟರೆ ದೇಶದ ಯಾವ ರಾಜ್ಯದಲ್ಲೂ ಇಂತಹ ಯೋಜನೆ ಇಲ್ಲ ಎಂದರು.

ರಾಜ್ಯದಲ್ಲಿ ₹58 ಸಾವಿರ ಕೋಟಿ ಹಣದ ಹೊರೆ ಸರ್ಕಾರಕ್ಕೆ ಆಗುತ್ತಿದೆ.ಆದರೂ, ಈ ಬಗ್ಗೆ ಯಾವುದೇ,ಒಳ ಒಪ್ಪಂದಕ್ಕೆ ಸರ್ಕಾರ ಸಿದ್ದವಿಲ್ಲ.ಜನ ಸಾಮಾನ್ಯರ ತೆರಿಗೆ ಹಣವನ್ನು ಪುನಃ ಜನರಿಗೆ ತಲುಪಿಸಲಾಗುತ್ತಿದೆ ಎನ್ನುವ ಸಂತಸ ಸರ್ಕಾರಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು, ತಮ್ಮ ಬದುಕಿನುದ್ದಕ್ಕೂ ಸಹ ಬಡವರು,ದಲಿತರು,ಶೋಷಿತ ವರ್ಗದವರ ಪರವಾಗಿಯೇ ಚಿಂತಿಸುತ್ತಿದ್ದರು.ಅಂದು, ಬಂಗಾರಪ್ಪ ಅವರು ಜನ ಸಾಮಾನ್ಯರಿಗೆ ನೀಡಿದ ಸೇವೆ, ಇಂದಿಗೂ ಜೀವಂತವಾಗಿವೆ ಎಂದರು.

ಬಂಗಾರಪ್ಪ ಅವರ,ಆರಾಧನ, ಗ್ರಾಮೀಣ ಕೃಪಾಂಕ,ಆಶ್ರಯ ಮತ್ತು ರೈತರ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಯೋಜನೆಗಳನ್ನು ಬಡವರಿಗೆ ಬದುಕಲು ನೆಲೆ ಕಲ್ಪಿಸಿಕೊಟ್ಟಿವೆ ಎಂದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಬಿಜೆಪಿ ಆಡಳಿತದಿಂದ ಜನ ಸಾಮಾನ್ಯರು ಬದುಕು ನಡೇಸುವುದೇ ಶೋಚನೀಯ ಸ್ಥಿತಿಗೆ ತಲುಪಿದೆ ಎಂದರು.

ಮಾಜಿ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಮಾತನಾಡಿ,ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಲತಾಯಿ ಧೋರಣೆ ತೋರಿದ್ದಾರೆ.ಅಧಿಕಾರದ ಗದ್ದಿಗೆ ಏರಿ 15 ವರ್ಷ ಕಳೆದವು.ಆದರೆ,ಕ್ಷೇತ್ರ ಮಾತ್ರ ಕತ್ತಲಲ್ಲಿ ಮುಳುಗಿದೆ ಎಂದು ದೂರಿದರು.
ಡಾ.ಶಿವರಾಜ್ ಕುಮಾರ್ ಮಾತನಾಡಿ,ಚಿಕ್ಕ ವಯಸ್ಸಿನಿಂದ ಪತ್ನಿ ಗೀತಾ ಅವರು ಬಂಗಾರಪ್ಪ ಅವರ ರಾಜಕೀಯ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿ ಬೆಳೆದಿದ್ದಾರೆ.ಬಂಗಾರಪ್ಪ ಅವರು, ಎಲ್ಲಾ ಧರ್ಮ, ಸಮುದಾಯಗಳನ್ನು ಪ್ರೀತಿಯಿಂದ ಕಾಣುತ್ತಿದ್ದರು. ಅದೇ ಗುಣ ಗೀತಾ ಅವರಿಗೆ ಬಂದಿದೆ.ಜಿಲ್ಲೆಯಲ್ಲಿ ಬಂಗಾರಪ್ಪ ಅವರ ಋಣ ತೀರಿಸಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕೇಳಿಕೊಂಡರು.

ಪ್ರಮುಖರಾದ ರಾಜು ಪೂಜಾರಿ,ಪ್ರದೀಪ್ ಕುಮಾರ್ ಶೆಟ್ಟಿ,ಅರವಿಂದ ಪೂಜಾರಿ, ಹರೀಶ್ ಕೊಡಪಾಡಿ, ಚಂದ್ರ ಶೇಖರ ಪೂಜಾರಿ,ಮಂಜುಳ ದೇವಾಡಿಗ ಸೇರಿ, ರಾಜು ದೇವಾಡಿಗ,ಅನಂತ ಮೊವಾಡಿ ಮತ್ತಿತರರು ಉಪಸ್ಥಿತರಿದ್ದರು.
ಅನಂತ ಮೊವಾಡಿ ಸ್ವಾಗತಿಸಿ.ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

14 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

1 day ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

4 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago