ಕುಂದಾಪುರ:ರಾಜ್ಯದಲ್ಲಿ ಕುಟುಂಬ ರಾಜಕಾರಣವನ್ನು ತೊಲಗಿಸಬೇಕು ಹಾಗೂ ಬಿಜೆಪಿ ಪಕ್ಷವನ್ನು ಶುದ್ಧೀಕರಣ ಮಾಡುವ ದೃಷ್ಟಿಯಿಂದ,ನೊಂದ ಕಾರ್ಯಕರ್ತರಿಗೆ ನ್ಯಾಯವನ್ನು ದೊರಕಿಸಿ ಕೊಡುವ ಉದ್ದೇಶದಿಂದ ನಾನು ಇವೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ.ನೂರಕ್ಕೆ ನೂರು ತನ್ನ ಗೆಲುವು ನಿಶ್ಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ರಾಷ್ಟ್ರಭಕ್ತರ ಬಳಗ ಮಾಜಿ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕುಂದಾಪುರ ತಾಲೂಕಿನ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಆರವತ್ತು ಪರ್ಸೆಂಟ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷ ಸಹಿತ ಜೆಡಿಎಸ್ ಪಕ್ಷದ ಕಾರ್ಯಕರ್ತರು,ಎಲ್ಲಾ ಸಮುದಾಯದ ಜನರು ನನಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.ಯಾವುದೆ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿ ಭಾವ ಚಿತ್ರವನ್ನು ಈಶ್ವರಪ್ಪನವರಿಗೆ ಬಳಸಿಕೊಳ್ಳಲು ಯಾವುದೇ ರೀತಿ ಹಕ್ಕು ಇಲ್ಲಾ ಎಂದು ಪ್ರಶ್ನಿಸಿದ ರಾಘವೇಂದ್ರ ಅವರಿಗೆ ಮಾತಿನ ಮೂಲಕ ಚಾಟಿ ಬಿಸಿದ ಈಶ್ವರಪ್ಪನವರು ನರೇಂದ್ರ ಮೋದಿ ಅವರು ರಾಘವೇಂದ್ರ ಅವರ ಅಪ್ಪನ ಆಸ್ತಿಯ ಎಂದು ಪ್ರಶ್ನಿಸಿದರು.ಚುನಾವಣೆ ಭಯದಿಂದ ಮೋದಿ ಅವರ ಹೆಸರಿನಲ್ಲಿ ಜನರನ್ನು ಹಾದಿ ತಪ್ಪಿಸುವ ಕೆಲಸವನ್ನು ಬಿ.ವೈ ರಾಘವೇಂದ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ನನಗೆ ಸಿಕ್ಕಿರುವ ಹಿಂದುತ್ವ ಬೆಂಬಲ ಹಾಗೂ ಸ್ತ್ರೀ ಸಾಮಾನ್ಯರ ಆಶೀರ್ವಾದ ದೊರಕಿರುವುದರಿಂದ ಇನ್ನಷ್ಟು ಶಕ್ತಿ ಬಂದಿದೆ ಎಂದು ಹೇಳಿದರು. ಕಳೆದ ನಲವತ್ತು ವರ್ಷಗಳಿಂದ ಹೋರಾಟದ ಮೂಲಕ ರಾಜಕೀಯದಲ್ಲಿ ಬೆಳೆದು ಬಂದಿದ್ದೇನೆ.ಬಿಜೆಪಿ ಪಕ್ಷ ಯಡ್ಯೂರಪ್ಪರವರ ವೈಯಕ್ತಿಕ ಆಸ್ತಿಯಲ್ಲ.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರತಿ ಭಾಗಕ್ಕೆ ಬೇಟಿ ನೀಡುತ್ತಿದ್ದೇನೆ.ಸಮಸ್ತ ಹಿಂದೂ ಕಾರ್ಯಕರ್ತರು ಸಂಘಟಿತರಾಗಿ ನನ್ನನ್ನು ಬೆಂಬಲಿಸುತ್ತಿದ್ದಾರೆ.ನನ್ನ ವಿರುದ್ದ ಮಾಜಿ ಮುಖ್ಯಮಂತ್ರಿ ಯಡ್ಯೂರಪ್ಪ ಕುಟುಂಬ ನಡೆಸುತ್ತಿರುವ ಯಾವ ಷಡ್ಯಂತ್ರಕ್ಕೂ ಹೆದರಲಾರೆ.ಈ ಬಾರಿ ಚುನಾವಣೆಯಲ್ಲಿ ನೂರಕ್ಕೆ ನೂರು ಯಡ್ಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಸೋಲುವುದು ಖಚಿತ ಎಂದು ಈಶ್ವರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಶ್ರೀಧರ ಬಿಜೂರು,ಗೋಪಾಲಕೃಷ್ಣ ನಾಡ,ಕಟ್ಬೇಲ್ತೂರು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್ ಪುತ್ರನ್,ಮೀನುಗಾರ ಮುಖಂಡ ಮೋಹನ್ ಖಾರ್ವಿ ಉಪ್ಪÅಂದ ಉಪಸ್ಥಿತರಿದ್ದರು.
ನಮ್ಮ ಜಾಲಾತಾಣದಲ್ಲಿ ಸುದ್ದಿ ಪ್ರಕಟಿಸಲು ಸಂಪರ್ಕಿಸಿ-9916284048
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…