ಕುಂದಾಪುರ

ಹಸಿರು ಹೊರೆ ಕಾಣಿಕೆ ಸಮರ್ಪಣೆ

Share

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ,ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 14 ರ ಭಾನುವಾರದಂದು ನಡೆಯಲಿರುವ ಅಷ್ಟಬಂಧ ನಾಗಮಂಡಲೋತ್ಸ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು.
ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ಅವರು ಹಸಿರು ಹೊರೆ ಕಾಣಿಕೆ ಮೆರವಣಿಗೆ ಚಾಲನೆಯನ್ನು ನೀಡಿ ಮಾತನಾಡಿ,ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಕ್ಕೆ ಭಕ್ತಾಬಿಮಾನಿಗಳಿಂದ ತುಂಬು ಹೃದಯಿಂದ ಹೊರೆ ಕಾಣಿಕೆಯನ್ನು ಪಡೆದುಕೊಳ್ಳಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಾಗಮಂಡಲ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಕೇಳಿಕೊಂಡರು.
ಕರಾವಳಿ ಭಾಗದಲ್ಲಿ ನಾಗನಿಗೆ ವಿಶೇಷವಾದ ಪ್ರಾದಿನ್ಯತೆ ಇದೆ ಸಂತಾನ ಪ್ರಾಪ್ತಿಗಾಗಿ,ಆರೋಗ್ಯಕ್ಕಾಗಿ,ಇಷ್ಟಾರ್ಥ ಸಿದ್ಧಿಗಾಗಿ ನಾಗಮಂಡಲವನ್ನು ಮಾಡಲಾಗುತ್ತದೆ.ಭಕ್ತರು ನಾಗದೇವರ ಮೇಲೆ ಇಟ್ಟಿರುವ ಭಕ್ತಿಯ ರೂಪ ಕೂಡ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಜಯರಾಮ ಸ್ವಾಮಿ,ನಾಗಮಂಡಲೋತ್ಸವ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago