ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ

Share

Advertisement
Advertisement
Advertisement

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಬೈಂದೂರಿಗೆ ಬಂದು ಹಿಂದುತ್ವದ ಬಗ್ಗೆ ಮಾತನಾಡಿದ ತಕ್ಷಣವೇ ದೊಡ್ಡ ಬದಲಾವಣೆಯಾಗಲಿದೆ ಎಂಬ ಭ್ರಮೆ ಬೇಡ.ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುವ ನಿಮ್ಮ ಹಿಂದುತ್ವದ ಬಗ್ಗೆ ನಮಗೂ ತಿಳಿದಿದೆ. ಬಿ.ಎಸ್.ಯಡಿಯೂರಪ್ಪ ಅವರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುದನ್ನು ನೀವು ಮೊದಲು ಅರ್ಥ ಮಾಡಿಕೊಳ್ಳಿ. ನಿಮ್ಮನ್ನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ, ಬಿ.ಎಸ್.ವೈ. ಹೊರತು ಬೇರ್ಯಾರು ಅಲ್ಲ ಎಂಬುದೂ ನೆನಪಿರಲಿ ಎಂದು ಪ್ರಕಟನೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೋದಿಯವರ ಹೆಸರಿನಲ್ಲಿ ಪದೇ ಪದೇ ಬಿಜೆಪಿ ಪಕ್ಷಕ್ಕೆ ಮುಜುಗರ ಮಾಡುತ್ತಿರುವುದ್ಯಾಕೆ, ಮೋದಿಯವರೇ ನಿಮ್ಮನ್ನು ತಿರಸ್ಕಾರ ಮಾಡಿರುವಾಗ ಮೋದಿಯವರ ಭಾವ ಚಿತ್ರ ಯಾಕೆ ಬಳಸುತ್ತಿದ್ದೀರಿ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ.
ಅನಂತ್ ಕುಮಾರ್, ಹೆಗಡೆ, ಪ್ರತಾಪ್ ಸಿಂಹ ಮೊದಲಾದ ನಾಯಕರು ಟಿಕೆಟ್ ತಪ್ಪಿದಾಗ ಚಕಾರ ಎತ್ತಲಿಲ್ಲ.ನಿಮಗೆ ಪಕ್ಷಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮೇಲಾಯಿತೆ.ಎಲ್ಲಾ ರೀತಿಯ ಸ್ಥಾನ ಮಾನ ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಬಗೆದರೆ ದೇವರು ಮೆಚ್ಚುತ್ತಾನೆಯೇ ಎಂದು ಕಿಡಿಕಾರಿದ್ದಾರೆ.
ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳದ ನೀವು ಮೋದಿ ಹೆಸರು ಬಳಕೆ ಮಾಡುತ್ತಿದ್ದೀರಿ?. ಮೋದಿಯವರು ಪ್ರಧಾನಿ ಆಗಬಾರದು ಎನ್ನುವುದು ನಿಮ್ಮ ಬಂಡಾಯವೇ? ಎಂದು ಈಶ್ವರಪ್ಪನವರನ್ನು ಪ್ರಶ್ನಿಸಿದ್ದಾರೆ.
ಪಕ್ಷದಿಂದ ಎಲ್ಲಾ ಸ್ಥಾನ ಮಾನ ಅನುಭವಿಸಿದ್ದರು, ಈ ಹಿಂದೆ ಬ್ರಿಗೆಟ್ ಹೆಸರಿನಲ್ಲಿ ಅನ್ಯಾಯ ಮಾಡಿದ್ರೀ ಈಗ ಬಂಡಾಯದ ಮೂಲಕ ತಾವು ಪಕ್ಷ ನಿಷ್ಠರಲ್ಲ ಎಂಬುದನ್ನು ಸಾಬೀತು ಮಾಡಿದ್ದೀರಿ ಎಂದಿದ್ದಾರೆ.
ಮಗನಿಗೆ ಹಾವೇರಿಯಲ್ಲಿ ಟಿಕೆಟ್ ಕೇಳಿದ್ದ ನೀವು ಶಿವಮೊಗ್ಗದಲ್ಲಿ ಏಕೆ ಸ್ಪರ್ಧಿಸುತ್ತಿದ್ದೀರಿ? ಹಾವೇರಿಯಲ್ಲೇ ಶಕ್ತಿ ಪ್ರದರ್ಶನ ಮಾಡಬಹುದಿತ್ತಲ್ಲ?.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದಾಗ ಮರಿ ರಾಜಹುಲಿ ಎಂದಿದ್ದ ನೀವು ಆಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?.
ಅಧಿಕಾರಕ್ಕಾಗಿ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಹೋಗುವಾಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?ಅಧಿಕಾರಕ್ಕಾಗಿ ಜಾತಿಯನ್ನು ಮುಂದೆ ತರುವುದು,ಬ್ರೀಗೆಡ್ ಹೆಸರಿನಲ್ಲಿ ಬಿಜೆಪಿಗೆ ತ್ರೇಟ್ ನೀಡುವ ನಿಮ್ಮ ಸಂಸ್ಕೃತಿ ಯಾವುದು?.
ದೆಹಲಿಗೆ ಹೋದರೂ ವರಿಷ್ಠರು ನಿಮಗೆ ಮಾತನಾಡಲು ಸಿಗಲಿಲ್ಲ ಯಾಕೆ?.
ಚುನಾವಣೆ ಸಂದರ್ಭದಲ್ಲಿ ನಿಮಗೆ ಹಿಂದುತ್ವ ನೆನಪಾಯಿತೇ? ಈ ಹಿಂದೆ ಕರಾವಳಿ ಹಿಂದು ಸಂಘಟನೆ ಕಾರ್ಯಕರ್ತರು ಹೇಗಿದ್ದರು ಎಂದು ಒಮ್ಮೆಯಾದರೂ ವಿಚಾರಿಸಿದ್ದೀರಾ?.
ಬೈಂದೂರಿಗೆ ನಿಮ್ಮ ಕೊಡುಗೆ ಏನು?
ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳುವುದರ ಮುಖೇನ ಈಶ್ವರಪ್ಪ ಅವರಿಗೆ ಸಾವಾಲು ಎಸೆದಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page