ಕುಂದಾಪುರ

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ

Share

Advertisement
Advertisement

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

Advertisement

ಬೈಂದೂರಿಗೆ ಬಂದು ಹಿಂದುತ್ವದ ಬಗ್ಗೆ ಮಾತನಾಡಿದ ತಕ್ಷಣವೇ ದೊಡ್ಡ ಬದಲಾವಣೆಯಾಗಲಿದೆ ಎಂಬ ಭ್ರಮೆ ಬೇಡ.ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುವ ನಿಮ್ಮ ಹಿಂದುತ್ವದ ಬಗ್ಗೆ ನಮಗೂ ತಿಳಿದಿದೆ. ಬಿ.ಎಸ್.ಯಡಿಯೂರಪ್ಪ ಅವರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುದನ್ನು ನೀವು ಮೊದಲು ಅರ್ಥ ಮಾಡಿಕೊಳ್ಳಿ. ನಿಮ್ಮನ್ನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ, ಬಿ.ಎಸ್.ವೈ. ಹೊರತು ಬೇರ್ಯಾರು ಅಲ್ಲ ಎಂಬುದೂ ನೆನಪಿರಲಿ ಎಂದು ಪ್ರಕಟನೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೋದಿಯವರ ಹೆಸರಿನಲ್ಲಿ ಪದೇ ಪದೇ ಬಿಜೆಪಿ ಪಕ್ಷಕ್ಕೆ ಮುಜುಗರ ಮಾಡುತ್ತಿರುವುದ್ಯಾಕೆ, ಮೋದಿಯವರೇ ನಿಮ್ಮನ್ನು ತಿರಸ್ಕಾರ ಮಾಡಿರುವಾಗ ಮೋದಿಯವರ ಭಾವ ಚಿತ್ರ ಯಾಕೆ ಬಳಸುತ್ತಿದ್ದೀರಿ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ.
ಅನಂತ್ ಕುಮಾರ್, ಹೆಗಡೆ, ಪ್ರತಾಪ್ ಸಿಂಹ ಮೊದಲಾದ ನಾಯಕರು ಟಿಕೆಟ್ ತಪ್ಪಿದಾಗ ಚಕಾರ ಎತ್ತಲಿಲ್ಲ.ನಿಮಗೆ ಪಕ್ಷಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮೇಲಾಯಿತೆ.ಎಲ್ಲಾ ರೀತಿಯ ಸ್ಥಾನ ಮಾನ ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಬಗೆದರೆ ದೇವರು ಮೆಚ್ಚುತ್ತಾನೆಯೇ ಎಂದು ಕಿಡಿಕಾರಿದ್ದಾರೆ.
ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳದ ನೀವು ಮೋದಿ ಹೆಸರು ಬಳಕೆ ಮಾಡುತ್ತಿದ್ದೀರಿ?. ಮೋದಿಯವರು ಪ್ರಧಾನಿ ಆಗಬಾರದು ಎನ್ನುವುದು ನಿಮ್ಮ ಬಂಡಾಯವೇ? ಎಂದು ಈಶ್ವರಪ್ಪನವರನ್ನು ಪ್ರಶ್ನಿಸಿದ್ದಾರೆ.
ಪಕ್ಷದಿಂದ ಎಲ್ಲಾ ಸ್ಥಾನ ಮಾನ ಅನುಭವಿಸಿದ್ದರು, ಈ ಹಿಂದೆ ಬ್ರಿಗೆಟ್ ಹೆಸರಿನಲ್ಲಿ ಅನ್ಯಾಯ ಮಾಡಿದ್ರೀ ಈಗ ಬಂಡಾಯದ ಮೂಲಕ ತಾವು ಪಕ್ಷ ನಿಷ್ಠರಲ್ಲ ಎಂಬುದನ್ನು ಸಾಬೀತು ಮಾಡಿದ್ದೀರಿ ಎಂದಿದ್ದಾರೆ.
ಮಗನಿಗೆ ಹಾವೇರಿಯಲ್ಲಿ ಟಿಕೆಟ್ ಕೇಳಿದ್ದ ನೀವು ಶಿವಮೊಗ್ಗದಲ್ಲಿ ಏಕೆ ಸ್ಪರ್ಧಿಸುತ್ತಿದ್ದೀರಿ? ಹಾವೇರಿಯಲ್ಲೇ ಶಕ್ತಿ ಪ್ರದರ್ಶನ ಮಾಡಬಹುದಿತ್ತಲ್ಲ?.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದಾಗ ಮರಿ ರಾಜಹುಲಿ ಎಂದಿದ್ದ ನೀವು ಆಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?.
ಅಧಿಕಾರಕ್ಕಾಗಿ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಹೋಗುವಾಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?ಅಧಿಕಾರಕ್ಕಾಗಿ ಜಾತಿಯನ್ನು ಮುಂದೆ ತರುವುದು,ಬ್ರೀಗೆಡ್ ಹೆಸರಿನಲ್ಲಿ ಬಿಜೆಪಿಗೆ ತ್ರೇಟ್ ನೀಡುವ ನಿಮ್ಮ ಸಂಸ್ಕೃತಿ ಯಾವುದು?.
ದೆಹಲಿಗೆ ಹೋದರೂ ವರಿಷ್ಠರು ನಿಮಗೆ ಮಾತನಾಡಲು ಸಿಗಲಿಲ್ಲ ಯಾಕೆ?.
ಚುನಾವಣೆ ಸಂದರ್ಭದಲ್ಲಿ ನಿಮಗೆ ಹಿಂದುತ್ವ ನೆನಪಾಯಿತೇ? ಈ ಹಿಂದೆ ಕರಾವಳಿ ಹಿಂದು ಸಂಘಟನೆ ಕಾರ್ಯಕರ್ತರು ಹೇಗಿದ್ದರು ಎಂದು ಒಮ್ಮೆಯಾದರೂ ವಿಚಾರಿಸಿದ್ದೀರಾ?.
ಬೈಂದೂರಿಗೆ ನಿಮ್ಮ ಕೊಡುಗೆ ಏನು?
ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳುವುದರ ಮುಖೇನ ಈಶ್ವರಪ್ಪ ಅವರಿಗೆ ಸಾವಾಲು ಎಸೆದಿದ್ದಾರೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago