ಕುಂದಾಪುರ

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ

Share

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಬೈಂದೂರಿಗೆ ಬಂದು ಹಿಂದುತ್ವದ ಬಗ್ಗೆ ಮಾತನಾಡಿದ ತಕ್ಷಣವೇ ದೊಡ್ಡ ಬದಲಾವಣೆಯಾಗಲಿದೆ ಎಂಬ ಭ್ರಮೆ ಬೇಡ.ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುವ ನಿಮ್ಮ ಹಿಂದುತ್ವದ ಬಗ್ಗೆ ನಮಗೂ ತಿಳಿದಿದೆ. ಬಿ.ಎಸ್.ಯಡಿಯೂರಪ್ಪ ಅವರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುದನ್ನು ನೀವು ಮೊದಲು ಅರ್ಥ ಮಾಡಿಕೊಳ್ಳಿ. ನಿಮ್ಮನ್ನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ, ಬಿ.ಎಸ್.ವೈ. ಹೊರತು ಬೇರ್ಯಾರು ಅಲ್ಲ ಎಂಬುದೂ ನೆನಪಿರಲಿ ಎಂದು ಪ್ರಕಟನೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೋದಿಯವರ ಹೆಸರಿನಲ್ಲಿ ಪದೇ ಪದೇ ಬಿಜೆಪಿ ಪಕ್ಷಕ್ಕೆ ಮುಜುಗರ ಮಾಡುತ್ತಿರುವುದ್ಯಾಕೆ, ಮೋದಿಯವರೇ ನಿಮ್ಮನ್ನು ತಿರಸ್ಕಾರ ಮಾಡಿರುವಾಗ ಮೋದಿಯವರ ಭಾವ ಚಿತ್ರ ಯಾಕೆ ಬಳಸುತ್ತಿದ್ದೀರಿ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ.
ಅನಂತ್ ಕುಮಾರ್, ಹೆಗಡೆ, ಪ್ರತಾಪ್ ಸಿಂಹ ಮೊದಲಾದ ನಾಯಕರು ಟಿಕೆಟ್ ತಪ್ಪಿದಾಗ ಚಕಾರ ಎತ್ತಲಿಲ್ಲ.ನಿಮಗೆ ಪಕ್ಷಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮೇಲಾಯಿತೆ.ಎಲ್ಲಾ ರೀತಿಯ ಸ್ಥಾನ ಮಾನ ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಬಗೆದರೆ ದೇವರು ಮೆಚ್ಚುತ್ತಾನೆಯೇ ಎಂದು ಕಿಡಿಕಾರಿದ್ದಾರೆ.
ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳದ ನೀವು ಮೋದಿ ಹೆಸರು ಬಳಕೆ ಮಾಡುತ್ತಿದ್ದೀರಿ?. ಮೋದಿಯವರು ಪ್ರಧಾನಿ ಆಗಬಾರದು ಎನ್ನುವುದು ನಿಮ್ಮ ಬಂಡಾಯವೇ? ಎಂದು ಈಶ್ವರಪ್ಪನವರನ್ನು ಪ್ರಶ್ನಿಸಿದ್ದಾರೆ.
ಪಕ್ಷದಿಂದ ಎಲ್ಲಾ ಸ್ಥಾನ ಮಾನ ಅನುಭವಿಸಿದ್ದರು, ಈ ಹಿಂದೆ ಬ್ರಿಗೆಟ್ ಹೆಸರಿನಲ್ಲಿ ಅನ್ಯಾಯ ಮಾಡಿದ್ರೀ ಈಗ ಬಂಡಾಯದ ಮೂಲಕ ತಾವು ಪಕ್ಷ ನಿಷ್ಠರಲ್ಲ ಎಂಬುದನ್ನು ಸಾಬೀತು ಮಾಡಿದ್ದೀರಿ ಎಂದಿದ್ದಾರೆ.
ಮಗನಿಗೆ ಹಾವೇರಿಯಲ್ಲಿ ಟಿಕೆಟ್ ಕೇಳಿದ್ದ ನೀವು ಶಿವಮೊಗ್ಗದಲ್ಲಿ ಏಕೆ ಸ್ಪರ್ಧಿಸುತ್ತಿದ್ದೀರಿ? ಹಾವೇರಿಯಲ್ಲೇ ಶಕ್ತಿ ಪ್ರದರ್ಶನ ಮಾಡಬಹುದಿತ್ತಲ್ಲ?.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದಾಗ ಮರಿ ರಾಜಹುಲಿ ಎಂದಿದ್ದ ನೀವು ಆಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?.
ಅಧಿಕಾರಕ್ಕಾಗಿ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಹೋಗುವಾಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?ಅಧಿಕಾರಕ್ಕಾಗಿ ಜಾತಿಯನ್ನು ಮುಂದೆ ತರುವುದು,ಬ್ರೀಗೆಡ್ ಹೆಸರಿನಲ್ಲಿ ಬಿಜೆಪಿಗೆ ತ್ರೇಟ್ ನೀಡುವ ನಿಮ್ಮ ಸಂಸ್ಕೃತಿ ಯಾವುದು?.
ದೆಹಲಿಗೆ ಹೋದರೂ ವರಿಷ್ಠರು ನಿಮಗೆ ಮಾತನಾಡಲು ಸಿಗಲಿಲ್ಲ ಯಾಕೆ?.
ಚುನಾವಣೆ ಸಂದರ್ಭದಲ್ಲಿ ನಿಮಗೆ ಹಿಂದುತ್ವ ನೆನಪಾಯಿತೇ? ಈ ಹಿಂದೆ ಕರಾವಳಿ ಹಿಂದು ಸಂಘಟನೆ ಕಾರ್ಯಕರ್ತರು ಹೇಗಿದ್ದರು ಎಂದು ಒಮ್ಮೆಯಾದರೂ ವಿಚಾರಿಸಿದ್ದೀರಾ?.
ಬೈಂದೂರಿಗೆ ನಿಮ್ಮ ಕೊಡುಗೆ ಏನು?
ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳುವುದರ ಮುಖೇನ ಈಶ್ವರಪ್ಪ ಅವರಿಗೆ ಸಾವಾಲು ಎಸೆದಿದ್ದಾರೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago