ಕುಂದಾಪುರ

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ

Share

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಬೈಂದೂರಿಗೆ ಬಂದು ಹಿಂದುತ್ವದ ಬಗ್ಗೆ ಮಾತನಾಡಿದ ತಕ್ಷಣವೇ ದೊಡ್ಡ ಬದಲಾವಣೆಯಾಗಲಿದೆ ಎಂಬ ಭ್ರಮೆ ಬೇಡ.ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುವ ನಿಮ್ಮ ಹಿಂದುತ್ವದ ಬಗ್ಗೆ ನಮಗೂ ತಿಳಿದಿದೆ. ಬಿ.ಎಸ್.ಯಡಿಯೂರಪ್ಪ ಅವರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುದನ್ನು ನೀವು ಮೊದಲು ಅರ್ಥ ಮಾಡಿಕೊಳ್ಳಿ. ನಿಮ್ಮನ್ನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ, ಬಿ.ಎಸ್.ವೈ. ಹೊರತು ಬೇರ್ಯಾರು ಅಲ್ಲ ಎಂಬುದೂ ನೆನಪಿರಲಿ ಎಂದು ಪ್ರಕಟನೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೋದಿಯವರ ಹೆಸರಿನಲ್ಲಿ ಪದೇ ಪದೇ ಬಿಜೆಪಿ ಪಕ್ಷಕ್ಕೆ ಮುಜುಗರ ಮಾಡುತ್ತಿರುವುದ್ಯಾಕೆ, ಮೋದಿಯವರೇ ನಿಮ್ಮನ್ನು ತಿರಸ್ಕಾರ ಮಾಡಿರುವಾಗ ಮೋದಿಯವರ ಭಾವ ಚಿತ್ರ ಯಾಕೆ ಬಳಸುತ್ತಿದ್ದೀರಿ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ.
ಅನಂತ್ ಕುಮಾರ್, ಹೆಗಡೆ, ಪ್ರತಾಪ್ ಸಿಂಹ ಮೊದಲಾದ ನಾಯಕರು ಟಿಕೆಟ್ ತಪ್ಪಿದಾಗ ಚಕಾರ ಎತ್ತಲಿಲ್ಲ.ನಿಮಗೆ ಪಕ್ಷಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮೇಲಾಯಿತೆ.ಎಲ್ಲಾ ರೀತಿಯ ಸ್ಥಾನ ಮಾನ ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಬಗೆದರೆ ದೇವರು ಮೆಚ್ಚುತ್ತಾನೆಯೇ ಎಂದು ಕಿಡಿಕಾರಿದ್ದಾರೆ.
ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳದ ನೀವು ಮೋದಿ ಹೆಸರು ಬಳಕೆ ಮಾಡುತ್ತಿದ್ದೀರಿ?. ಮೋದಿಯವರು ಪ್ರಧಾನಿ ಆಗಬಾರದು ಎನ್ನುವುದು ನಿಮ್ಮ ಬಂಡಾಯವೇ? ಎಂದು ಈಶ್ವರಪ್ಪನವರನ್ನು ಪ್ರಶ್ನಿಸಿದ್ದಾರೆ.
ಪಕ್ಷದಿಂದ ಎಲ್ಲಾ ಸ್ಥಾನ ಮಾನ ಅನುಭವಿಸಿದ್ದರು, ಈ ಹಿಂದೆ ಬ್ರಿಗೆಟ್ ಹೆಸರಿನಲ್ಲಿ ಅನ್ಯಾಯ ಮಾಡಿದ್ರೀ ಈಗ ಬಂಡಾಯದ ಮೂಲಕ ತಾವು ಪಕ್ಷ ನಿಷ್ಠರಲ್ಲ ಎಂಬುದನ್ನು ಸಾಬೀತು ಮಾಡಿದ್ದೀರಿ ಎಂದಿದ್ದಾರೆ.
ಮಗನಿಗೆ ಹಾವೇರಿಯಲ್ಲಿ ಟಿಕೆಟ್ ಕೇಳಿದ್ದ ನೀವು ಶಿವಮೊಗ್ಗದಲ್ಲಿ ಏಕೆ ಸ್ಪರ್ಧಿಸುತ್ತಿದ್ದೀರಿ? ಹಾವೇರಿಯಲ್ಲೇ ಶಕ್ತಿ ಪ್ರದರ್ಶನ ಮಾಡಬಹುದಿತ್ತಲ್ಲ?.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದಾಗ ಮರಿ ರಾಜಹುಲಿ ಎಂದಿದ್ದ ನೀವು ಆಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?.
ಅಧಿಕಾರಕ್ಕಾಗಿ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಹೋಗುವಾಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?ಅಧಿಕಾರಕ್ಕಾಗಿ ಜಾತಿಯನ್ನು ಮುಂದೆ ತರುವುದು,ಬ್ರೀಗೆಡ್ ಹೆಸರಿನಲ್ಲಿ ಬಿಜೆಪಿಗೆ ತ್ರೇಟ್ ನೀಡುವ ನಿಮ್ಮ ಸಂಸ್ಕೃತಿ ಯಾವುದು?.
ದೆಹಲಿಗೆ ಹೋದರೂ ವರಿಷ್ಠರು ನಿಮಗೆ ಮಾತನಾಡಲು ಸಿಗಲಿಲ್ಲ ಯಾಕೆ?.
ಚುನಾವಣೆ ಸಂದರ್ಭದಲ್ಲಿ ನಿಮಗೆ ಹಿಂದುತ್ವ ನೆನಪಾಯಿತೇ? ಈ ಹಿಂದೆ ಕರಾವಳಿ ಹಿಂದು ಸಂಘಟನೆ ಕಾರ್ಯಕರ್ತರು ಹೇಗಿದ್ದರು ಎಂದು ಒಮ್ಮೆಯಾದರೂ ವಿಚಾರಿಸಿದ್ದೀರಾ?.
ಬೈಂದೂರಿಗೆ ನಿಮ್ಮ ಕೊಡುಗೆ ಏನು?
ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳುವುದರ ಮುಖೇನ ಈಶ್ವರಪ್ಪ ಅವರಿಗೆ ಸಾವಾಲು ಎಸೆದಿದ್ದಾರೆ.

Advertisement

Share
Team Kundapur Times

Recent Posts

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 hours ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 days ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 weeks ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 weeks ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

3 weeks ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

3 weeks ago