ಕುಂದಾಪುರ

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು-ಈಶ್ವರಪ್ಪಗೆ ಬೈಂದೂರು ಬಿಜೆಪಿ ಪ್ರಶ್ನೆ

Share

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ ಅವರನ್ನು ಪಕ್ಷದ ವರಿಷ್ಠರೇ ತೀರ್ಮಾನಿಸಿ ಪ್ರಕಟಿಸಿದ್ದಾರೆ.ಹೀಗಿದುವಾಗ ಪಕ್ಷದ ನಿಲುವನ್ನೇ ಒಪ್ಪಿಕೊಳ್ಳದ ನಿಮಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಬೈಂದೂರಿಗೆ ಬಂದು ಹಿಂದುತ್ವದ ಬಗ್ಗೆ ಮಾತನಾಡಿದ ತಕ್ಷಣವೇ ದೊಡ್ಡ ಬದಲಾವಣೆಯಾಗಲಿದೆ ಎಂಬ ಭ್ರಮೆ ಬೇಡ.ಚುನಾವಣೆ ಸಂದರ್ಭದಲ್ಲಿ ಮಾತ್ರ ನೆನಪಾಗುವ ನಿಮ್ಮ ಹಿಂದುತ್ವದ ಬಗ್ಗೆ ನಮಗೂ ತಿಳಿದಿದೆ. ಬಿ.ಎಸ್.ಯಡಿಯೂರಪ್ಪ ಅವರು ಅತ್ಯಂತ ಕಷ್ಟದ ಪರಿಸ್ಥಿತಿಯಲ್ಲಿ ಪಕ್ಷ ಹೇಗೆ ಕಟ್ಟಿದ್ದಾರೆ ಎಂಬುದನ್ನು ನೀವು ಮೊದಲು ಅರ್ಥ ಮಾಡಿಕೊಳ್ಳಿ. ನಿಮ್ಮನ್ನು ಶಾಸಕ, ಸಚಿವ, ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ, ಬಿ.ಎಸ್.ವೈ. ಹೊರತು ಬೇರ್ಯಾರು ಅಲ್ಲ ಎಂಬುದೂ ನೆನಪಿರಲಿ ಎಂದು ಪ್ರಕಟನೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮೋದಿಯವರ ಹೆಸರಿನಲ್ಲಿ ಪದೇ ಪದೇ ಬಿಜೆಪಿ ಪಕ್ಷಕ್ಕೆ ಮುಜುಗರ ಮಾಡುತ್ತಿರುವುದ್ಯಾಕೆ, ಮೋದಿಯವರೇ ನಿಮ್ಮನ್ನು ತಿರಸ್ಕಾರ ಮಾಡಿರುವಾಗ ಮೋದಿಯವರ ಭಾವ ಚಿತ್ರ ಯಾಕೆ ಬಳಸುತ್ತಿದ್ದೀರಿ ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರು ಪ್ರಶ್ನೆ ಮಾಡಿದ್ದಾರೆ.
ಅನಂತ್ ಕುಮಾರ್, ಹೆಗಡೆ, ಪ್ರತಾಪ್ ಸಿಂಹ ಮೊದಲಾದ ನಾಯಕರು ಟಿಕೆಟ್ ತಪ್ಪಿದಾಗ ಚಕಾರ ಎತ್ತಲಿಲ್ಲ.ನಿಮಗೆ ಪಕ್ಷಕ್ಕಿಂತ ವೈಯಕ್ತಿಕ ಹಿತಾಸಕ್ತಿಯೇ ಮೇಲಾಯಿತೆ.ಎಲ್ಲಾ ರೀತಿಯ ಸ್ಥಾನ ಮಾನ ಅನುಭವಿಸಿ ಈಗ ಪಕ್ಷಕ್ಕೆ ದ್ರೋಹ ಬಗೆದರೆ ದೇವರು ಮೆಚ್ಚುತ್ತಾನೆಯೇ ಎಂದು ಕಿಡಿಕಾರಿದ್ದಾರೆ.
ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳದ ನೀವು ಮೋದಿ ಹೆಸರು ಬಳಕೆ ಮಾಡುತ್ತಿದ್ದೀರಿ?. ಮೋದಿಯವರು ಪ್ರಧಾನಿ ಆಗಬಾರದು ಎನ್ನುವುದು ನಿಮ್ಮ ಬಂಡಾಯವೇ? ಎಂದು ಈಶ್ವರಪ್ಪನವರನ್ನು ಪ್ರಶ್ನಿಸಿದ್ದಾರೆ.
ಪಕ್ಷದಿಂದ ಎಲ್ಲಾ ಸ್ಥಾನ ಮಾನ ಅನುಭವಿಸಿದ್ದರು, ಈ ಹಿಂದೆ ಬ್ರಿಗೆಟ್ ಹೆಸರಿನಲ್ಲಿ ಅನ್ಯಾಯ ಮಾಡಿದ್ರೀ ಈಗ ಬಂಡಾಯದ ಮೂಲಕ ತಾವು ಪಕ್ಷ ನಿಷ್ಠರಲ್ಲ ಎಂಬುದನ್ನು ಸಾಬೀತು ಮಾಡಿದ್ದೀರಿ ಎಂದಿದ್ದಾರೆ.
ಮಗನಿಗೆ ಹಾವೇರಿಯಲ್ಲಿ ಟಿಕೆಟ್ ಕೇಳಿದ್ದ ನೀವು ಶಿವಮೊಗ್ಗದಲ್ಲಿ ಏಕೆ ಸ್ಪರ್ಧಿಸುತ್ತಿದ್ದೀರಿ? ಹಾವೇರಿಯಲ್ಲೇ ಶಕ್ತಿ ಪ್ರದರ್ಶನ ಮಾಡಬಹುದಿತ್ತಲ್ಲ?.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದಾಗ ಮರಿ ರಾಜಹುಲಿ ಎಂದಿದ್ದ ನೀವು ಆಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?.
ಅಧಿಕಾರಕ್ಕಾಗಿ ಯಡಿಯೂರಪ್ಪ ಅವರ ಮನೆ ಬಾಗಿಲಿಗೆ ಹೋಗುವಾಗ ನಿಮಗೆ ಕುಟುಂಬ ರಾಜಕಾರಣ ನೆನಪಾಗಲಿಲ್ಲವೇ?ಅಧಿಕಾರಕ್ಕಾಗಿ ಜಾತಿಯನ್ನು ಮುಂದೆ ತರುವುದು,ಬ್ರೀಗೆಡ್ ಹೆಸರಿನಲ್ಲಿ ಬಿಜೆಪಿಗೆ ತ್ರೇಟ್ ನೀಡುವ ನಿಮ್ಮ ಸಂಸ್ಕೃತಿ ಯಾವುದು?.
ದೆಹಲಿಗೆ ಹೋದರೂ ವರಿಷ್ಠರು ನಿಮಗೆ ಮಾತನಾಡಲು ಸಿಗಲಿಲ್ಲ ಯಾಕೆ?.
ಚುನಾವಣೆ ಸಂದರ್ಭದಲ್ಲಿ ನಿಮಗೆ ಹಿಂದುತ್ವ ನೆನಪಾಯಿತೇ? ಈ ಹಿಂದೆ ಕರಾವಳಿ ಹಿಂದು ಸಂಘಟನೆ ಕಾರ್ಯಕರ್ತರು ಹೇಗಿದ್ದರು ಎಂದು ಒಮ್ಮೆಯಾದರೂ ವಿಚಾರಿಸಿದ್ದೀರಾ?.
ಬೈಂದೂರಿಗೆ ನಿಮ್ಮ ಕೊಡುಗೆ ಏನು?
ಎಂದು ಸಾಲು ಸಾಲು ಪ್ರಶ್ನೆಗಳನ್ನು ಕೇಳುವುದರ ಮುಖೇನ ಈಶ್ವರಪ್ಪ ಅವರಿಗೆ ಸಾವಾಲು ಎಸೆದಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

3 weeks ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago