ಕುಂದಾಪುರ

ವಿಶೇಷವಾಗಿ ರೈತರು,ಮೀನುಗಾರರು,ಕಾಫಿ ಬೆಳೆಗಾರರು ಕೈ ಹಿಡಿಯಲಿದ್ದಾರೆ-ಜಯಪ್ರಕಾಶ್ ಹೆಗ್ಡೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆ ರಚನೆ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರ ಜತೆಗೆ ರೈತರು,ಮೀನುಗಾರರು,ಕಾಫಿ ಬೆಳೆಗಾರರಿಗೆ ಮಾಡಿದಂತಹ ಅನುಕೂಲತೆಗಳು ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಹೆಚ್ಚಿನ ಸಮಯದಲ್ಲಿ ತೊಡಗಿಸಿಕೊಂಡಿದ್ದರಿಂದ ಜನರು ನನ್ನನ್ನು ಬೆಂಬಲಿಸಿ ಮತವನ್ನು ನೀಡಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಗುರುವಾರ ತಮ್ಮ ಸ್ವಗ್ರಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ತಮ್ಮ ಚುನಾವಣಾ ಪೂರ್ವ ತಯಾರಿ ಕುರಿತು ಹಾಗೂ ಜನರು ತಮ್ಮ ಮೇಲಿಟ್ಟಿರುವ ಪ್ರೀತಿ ವಿಶ್ವಾಸದ ಬಗ್ಗೆ ಮನದಾಳದ ಮಾತನ್ನು ಹಂಚಿಕೊಂಡರು.
ಬ್ಲಾಕ್ ಸಮಿತಿಗಳನ್ನು ಆರಂಭಿಸಿಕೊಂಡು ಈಗಾಗಲೇ ಚುನಾವಣೆ ಪೂರ್ವ ಸಿದ್ಧತೆಯನ್ನು ಆರಂಭಿಸಲಾಗಿದೆ.ಕುಂದಾಪುರ ಸಹಿತ ಉಡುಪಿ,ಕಾರ್ಕಳ,ಕಾಪು,ಹೆಬ್ರಿ ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.
ತನ್ನ ಒಡನಾಡಿಗಳು ಹಾಗೂ ಕ್ಷೇತ್ರದ ಜನರು ಈಗಾಲೇ ಅಭೂತ ಪೂರ್ವ ಬೆಂಬಲವನ್ನು ವ್ಯಕ್ತಪಡಿಸಿರುವ ಕುರಿತು ಸಂತೋಷವನ್ನು ಹಂಚಿಕೊಂಡ ಜಯಪ್ರಕಾಶ್ ಹೆಗ್ಡೆ ಅವರು ರಾಜಕೀಯ ಕ್ಷೇತ್ರ ಎನ್ನುವುದು ಉದ್ಯಮವಲ್ಲ ಸಾಮಾಜಿಕ ಕೆಲಸಗಳನ್ನು ಮಾಡಲು ಜನರು ನೀಡುವ ಒಂದು ಉತ್ತಮವಾದ ಅವಕಾಶವಾಗಿದೆ ಅದನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ಕ್ಷೇತ್ರದ ಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದನೆ ನೀಡುವುದಾಗಿ ಹೇಳಿದರು.ಬಹಳಷ್ಟು ವರ್ಷಗಳಿಂದ ರಾಜಕೀಯ ಮತ್ತು ಸಾಮಾಜಿಕ ಎರಡು ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ಅನುಭವದ ಆಧಾರದ ಮೇಲೆ ಅಭಿವೃದ್ಧಿಯಲ್ಲಿ ಹಿಂದುಳಿದ ಕ್ಷೇತ್ರವನ್ನು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಗೊಳಿಸಲು ಪ್ರಯತ್ನಿಸಲಾಗುವುದು ಎಂದರು.ಯುವ ಮತದಾರರು ಸಹಿತ ಕ್ಷೇತ್ರದ ಎಲ್ಲಾ ಸಮುದಾಯದ ಜನರು ತಮ್ಮ ಮತವನ್ನು ನೀಡುವುದರ ಮೂಲಕ ಆಶೀರ್ವಾದ ಮಾಡಬೇಕೆಂದು ವಿನಂತಿಸಿಕೊಂಡರು.
ಯಾರ ಮೇಲೂ ನನಗೆ ವೈಯಕ್ತಿಕವಾದ ದ್ವೇಷ ಇಲ್ಲಾ,ಸುಖಾಸುಮ್ಮನೆ ಯಾರ ಮೇಲೂ ಅಪವಾದ ಮಾತುಗಳನ್ನು ನಾನು ಆಡುವುದಿಲ್ಲ ನನ್ನ ಬಗ್ಗೆ ಜನರಿಗೆ ಗೊತ್ತಿದೆ ಎಂದರು.

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ನನ್ನ ಸಹೋದರರು ಅವರ ಆಶೀರ್ವಾದವನ್ನು ಈಗಾಗಲೆ ಪಡೆದಿದ್ದೇನೆ.ಅವರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ ಚುನಾವಣಾ ಪ್ರಚಾರಕ್ಕೆ ಬನ್ನಿ ಎಂದು ಕರೆಯುವುದು ಸರಿಯಲ್ಲ,ನಮಗೆ ಅವರ ಆರೋಗ್ಯ ಮುಖ್ಯವಾಗಿದೆ.ಕ್ಷೇತ್ರದ ಜನರ ಬೆಂಬಲ ಮತ್ತು ಅವರ ಬೆಂಬಲವೂ ನನಗೆ ದೊರಕಲಿದೆ ಎಂದರು.
:- ಸುದ್ದಿಗಳನ್ನು ನಮ್ಮ ಜಾಲಾತಾಣದಲ್ಲಿ ಬಿತ್ತರಿಸಲು ಸಂಪರ್ಕಿಸಿ-9916284048

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago