ಕುಂದಾಪುರ:ಮಕ್ಕಳಿಗೆ ಸಂಸ್ಕಾರವನ್ನು ಕೊಡದೆ ಕೇವಲ ಜ್ಞಾನವನ್ನು ಮಾತ್ರ ನೀಡಿದರೆ ಪ್ರಯೋಜನ ಶೂನ್ಯವಾಗಿದೆ.ವಿದ್ಯೆ ಜತೆಗೆ ಸಂಸ್ಕಾರ ನೀಡಿದಾಗ ಮಾತ್ರ ಧರ್ಮ ಉಳಿಯುತ್ತದೆ.ಮೇಕಾಲೆ ಶಿಕ್ಷಣ ಪದ್ದತಿಯಿಂದ ಇಂದು ಮಕ್ಕಳು ಸರ್ಟಿಫಿಕೇಟ್ ಶಿಕ್ಷಣವನ್ನು ಪಡೆಯಲು ಮಾತ್ರ ಸಾಧ್ಯವಾಗುತ್ತಿದೆ ಎಂದು ಹಾಲಾಡಿ ಪಂಚಾಂಗಕರ್ತರು ವಿದ್ವಾನ್ ವಾಸುದೇವ ಜೋಯಿಸರು ತಟ್ಟುವಟ್ಟು ಹೇಳಿದರು.
ಬೈಂದೂರು ತಾಲೂಕಿನ ನಾವುಂದ ಬಡಾಕರೆ ಧಾರ್ಮಿಕ ಮಂದಿರದಲ್ಲಿ ಗುರುವಾರ ನಡೆದ ಶ್ರೀ ಶಾರದಾ ಸದ್ವಿದ್ಯಾ ಶಿಬಿರ ವಸಂತ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದ ಪೀಠಂ ಶೃಂಗೇರಿ ವೇದ ಮೂರ್ತಿ ಲೋಕೇಶ್ ಅಡಿಗ ಮಾತನಾಡಿ,ಒಂದಲ್ಲ ಒಂದು ರೀತಿಯಲ್ಲಿ ಪ್ರತಿಯೊಂದು ಜೀವಿಗೂ ವಿದ್ಯೆ ಎನ್ನುವುದು ಬೇಕೆ ಬೇಕು.ವಿದ್ಯೆಯ ಜತೆಗೆ ಧಾರ್ಮಿಕ ಶಿಕ್ಷಣ ಸಿಕ್ಕಾಗ ಶ್ರೇಷ್ಠ ವ್ಯಕ್ತಿತ್ವ ರೂಪುಗೊಳ್ಳಲು ಸಹಕಾರಿ ಆಗುತ್ತದೆ ಎಂದರು.ತಪ್ಪನ್ನು ಅರಿತು ತಿದ್ದಿಕೊಳ್ಳುವುದೆ ನಮ್ಮನ್ನು ನಾವು ಶುದ್ಧಿ ಮಾಡಿಕೊಳ್ಳಲು ಇರುವ ಮಾರ್ಗವಾಗಿದೆ.ಜೀವನದಲ್ಲಿ ಹಣ ಮುಖ್ಯವಲ್ಲ ಸಮಾಜದಲ್ಲಿ ಜನರಿಗೆ ಒಳಿತನ್ನು ಮಾಡುವ ನಿಟ್ಟಿನಲ್ಲಿ ನಾವು ತೊಡಗಿಸಿಕೊಂಡಾಗ ಮಾತ್ರ ಸಾರ್ಥಕತೆಯಿಂದ ಜೀವನವನ್ನು ಕಾಣಬಹುದು ಎಂದು ಹೇಳಿದರು.
ಮಾಧವ ಅಡಿಗ ಬಡಾಕೆರೆ ಅಧ್ಯಕ್ಷತೆ ವಹಿಸಿದ್ದರು.ನಾಗಯಕ್ಷೀ ಪಾತ್ರಿಗಳಾದ ರಾಜೇಶ್ ಹೆಬ್ಬಾರ್,ಪ್ರಥಮ ದರ್ಜೆ ಗುತ್ತಿಗೆದಾರ ರಾಜೇಶ್ ಕಾರಂತ್ ಉಪ್ಪಿನಕುದ್ರು,ನಿವೃತ್ತ ಮಹಾಪ್ರಬಂಧಕರು ಕರ್ನಾಟಕ ಬ್ಯಾಂಕ್ ಯರ್ಲಪಾಡಿ ನಾಗರಾಜ ರಾವ್ ಬೈಕಾಡಿ,ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯ ಡಾ.ರಾಜೇಶ್ ಬಾಯರಿ ಕಳಿ ಆಲೂರು, ವೇದಮೂರ್ತಿ ನಾಗೇಂದ್ರ ಅಡಿಗ,ಮಂಜುನಾಥ ಅಡಿಗ,ಪ್ರಕಾಶ್ ಅಡಿಗ,ಜರ್ನಾದನ ಅಡಿಗ ಉಪಸ್ಥಿತರಿದ್ದರು.ವೇದ ಮೂರ್ತಿ ಸೀತಾರಾಮ ಆಡಿಗ,ವೇದ ಮೂರ್ತಿ ನಾಗೇಶ್ ಭಟ್ಟ್ ದೇವಲ್ಕುಂದ,ವಿಶ್ರಾಂತ ಅಧ್ಯಾಪಕರು ಮಾಧವ ಮಂಜರು ಅರೆಹೊಳೆ ಅವರನ್ನು ಸಮ್ಮಾನಿಸಲಾಯಿತು.ವೇದ ಮೂರ್ತಿ ನಾಗೇಂದ್ರ ಹೆಬ್ಬಾರ್ ಬವಲಾಡಿ,ಉರಗ ತಜ್ಞ ಸುಧೀಂದ್ರ ಐತಾಳ್ ಸಾಲಿಗ್ರಾಮ,ಕವಿಗಳಾದ ಮಂಜುನಾಥ ಮರವಂತೆ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ವೆಂಕಟೇಶ್ ಮೂರ್ತಿ,ಶ್ರೀಪತಿ ಭಟ್ ಅವರನ್ನು ಅಭಿನಂದಿಸಲಾಯಿತು.ವೇದ ಮೂರ್ತಿ ಲಕ್ಷ್ಮೀಶ ಅಡಿಗ ಸ್ವಾಗತಿಸಿದರು.ನಾಗರತ್ನ ಲಕ್ಷ್ಮೀಶ ಅಡಿಗ ಪ್ರಾರ್ಥಿಸಿದರು.ದಾಮೋದರ ಶರ್ಮಾ ನಿರೂಪಿಸಿದರು.ಮಹೇಶ್ ಹೆಗ್ಡೆ ವಂದಿಸಿದರು.ವಸಂತ ಶಿಬಿರ 21 ದಿನಗಳ ಕಾಲ ನಡೆಯಲಿದೆ.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…