ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸರಣಿ ಅಪಘಾತ,ನಾಲ್ವರಿಗೆ ಗಾಯ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ ಜತೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಏಳು ತಿಂಗಳ ಹಸುಗೂಸು ಪವಾಡಸದೃಶವಾಗಿ ಪಾರದ ಘಟನೆ ನಡೆದಿದೆ.
ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಕಾರನ್ನು ಚಾಲಕ ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಅಜಾಗರೂಕತೆಯಿಂದ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ.ಅದೆ ಸಮಯದಲ್ಲಿ ತ್ರಾಸಿ ಕಡೆಗೆ ಸಾಗಲು ಮುಳ್ಳಿಕಟ್ಟೆ ಸರ್ಕಲ್ ಬಳಿ ನಿಲ್ಲಿಸಿಕೊಂಡಿದ್ದ ರಿಕ್ಷಾದ ಮುಂಭಾಗಕ್ಕೆ ಕಾರು ಗುದ್ದಿದೆ.ಅಪಘಾತದ ರಭಸಕ್ಕೆ ರಾಘವೇಂದ್ರ ಪೂಜಾರಿ ಎಂಬುವವರ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,ಕಾರಿಗೂ ಹಾನಿಯಾಗಿದೆ.ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಜ್ಜಿ ಸೇರಿ ಓರ್ವ ಮಹಿಳೆಗೆ ಗಾಯವಾಗಿದೆ.ಕಾರಿನಲ್ಲಿದ್ದ ಒಬ್ಬ ಮಹಿಳೆಗೆ ಗಂಭೀರ ಸ್ವರೂಪದ ಗಾಯವಾಗಿದೆ.ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಗಾಯಾಳುಗಳನ್ನು ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದರ ಮುಖೇನ ಮುಳ್ಳಿಕಟ್ಟೆ ಶಂಕರನಾಗ್ ಆಟೋಸ್ಟ್ಯಾಂಡ್ ರಿಕ್ಷಾ ಚಾಲಕರು ಮಾನವೀಯತೆ ಮೆರೆದಿದ್ದಾರೆ.