ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ ಜತೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಏಳು ತಿಂಗಳ ಹಸುಗೂಸು ಪವಾಡಸದೃಶವಾಗಿ ಪಾರದ ಘಟನೆ ನಡೆದಿದೆ.
ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಕಾರನ್ನು ಚಾಲಕ ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಅಜಾಗರೂಕತೆಯಿಂದ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ.ಅದೆ ಸಮಯದಲ್ಲಿ ತ್ರಾಸಿ ಕಡೆಗೆ ಸಾಗಲು ಮುಳ್ಳಿಕಟ್ಟೆ ಸರ್ಕಲ್ ಬಳಿ ನಿಲ್ಲಿಸಿಕೊಂಡಿದ್ದ ರಿಕ್ಷಾದ ಮುಂಭಾಗಕ್ಕೆ ಕಾರು ಗುದ್ದಿದೆ.ಅಪಘಾತದ ರಭಸಕ್ಕೆ ರಾಘವೇಂದ್ರ ಪೂಜಾರಿ ಎಂಬುವವರ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,ಕಾರಿಗೂ ಹಾನಿಯಾಗಿದೆ.ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಜ್ಜಿ ಸೇರಿ ಓರ್ವ ಮಹಿಳೆಗೆ ಗಾಯವಾಗಿದೆ.ಕಾರಿನಲ್ಲಿದ್ದ ಒಬ್ಬ ಮಹಿಳೆಗೆ ಗಂಭೀರ ಸ್ವರೂಪದ ಗಾಯವಾಗಿದೆ.ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಗಾಯಾಳುಗಳನ್ನು ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದರ ಮುಖೇನ ಮುಳ್ಳಿಕಟ್ಟೆ ಶಂಕರನಾಗ್ ಆಟೋಸ್ಟ್ಯಾಂಡ್ ರಿಕ್ಷಾ ಚಾಲಕರು ಮಾನವೀಯತೆ ಮೆರೆದಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…