ಕುಂದಾಪುರ

ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಸರಣಿ ಅಪಘಾತ,ನಾಲ್ವರಿಗೆ ಗಾಯ

Share

ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಶುಕ್ರವಾರ ಸಂಭವಿಸಿದ ಗೂಡ್ಸ್ ಲಾರಿ,ಕಾರು,ರಿಕ್ಷಾ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.ತಾಯಿ ಜತೆ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಏಳು ತಿಂಗಳ ಹಸುಗೂಸು ಪವಾಡಸದೃಶವಾಗಿ ಪಾರದ ಘಟನೆ ನಡೆದಿದೆ.
ಕುಂದಾಪುರ ಕಡೆಯಿಂದ ಮುಳ್ಳಿಕಟ್ಟೆ ಮಾರ್ಗವಾಗಿ ಬಂಟ್ವಾಡಿ ಕಡೆಗೆ ಸಾಗುತ್ತಿದ್ದ ಕಾರನ್ನು ಚಾಲಕ ಮುಳ್ಳಿಕಟ್ಟೆ ಸರ್ಕಲ್‍ನಲ್ಲಿ ಅಜಾಗರೂಕತೆಯಿಂದ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಮಯದಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ವೇಗವಾಗಿ ಸಾಗುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ.ಅದೆ ಸಮಯದಲ್ಲಿ ತ್ರಾಸಿ ಕಡೆಗೆ ಸಾಗಲು ಮುಳ್ಳಿಕಟ್ಟೆ ಸರ್ಕಲ್ ಬಳಿ ನಿಲ್ಲಿಸಿಕೊಂಡಿದ್ದ ರಿಕ್ಷಾದ ಮುಂಭಾಗಕ್ಕೆ ಕಾರು ಗುದ್ದಿದೆ.ಅಪಘಾತದ ರಭಸಕ್ಕೆ ರಾಘವೇಂದ್ರ ಪೂಜಾರಿ ಎಂಬುವವರ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,ಕಾರಿಗೂ ಹಾನಿಯಾಗಿದೆ.ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಜ್ಜಿ ಸೇರಿ ಓರ್ವ ಮಹಿಳೆಗೆ ಗಾಯವಾಗಿದೆ.ಕಾರಿನಲ್ಲಿದ್ದ ಒಬ್ಬ ಮಹಿಳೆಗೆ ಗಂಭೀರ ಸ್ವರೂಪದ ಗಾಯವಾಗಿದೆ.ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಗಂಗೊಳ್ಳಿ ಠಾಣೆ ಪಿಎಸ್‍ಐ ಹರೀಶ್ ಆರ್ ಮತ್ತು ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಗಾಯಾಳುಗಳನ್ನು ತಕ್ಷಣದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವುದರ ಮುಖೇನ ಮುಳ್ಳಿಕಟ್ಟೆ ಶಂಕರನಾಗ್ ಆಟೋಸ್ಟ್ಯಾಂಡ್ ರಿಕ್ಷಾ ಚಾಲಕರು ಮಾನವೀಯತೆ ಮೆರೆದಿದ್ದಾರೆ.

Advertisement

Share
Team Kundapur Times

Recent Posts

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

3 weeks ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

3 weeks ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

1 month ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

2 months ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…

2 months ago