ಕುಂದಾಪುರ

ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಏಪ್ರಿಲ್.15 ರಂದು ಶುಭಾರಂಭಗೊಳ್ಳಲಿದೆ

Share

Advertisement
Advertisement

ಕುಂದಾಪುರ:ಕರಾವಳಿ ಮತ್ತು ಮಲೆನಾಡು ಪ್ರದೇಶದೊಂದಿಗೆ ಸಮ್ಮಿಲನಗೊಂಡಿರುವ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಆಧುನಿಕ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡಿರುವ ಶಿಕ್ಷಣ ಕ್ರಾಂತಿ ಹರಿಕಾರ ಎಂದೆ ಮನೆ ಮಾತಾಗಿರುವ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರು ಮತ್ತು ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರ ಸಾರಥ್ಯದಲ್ಲಿ ಹಾಗೂ ಸಮರ್ಪಣನ ಎಜುಕೇಶನ್ ಟ್ರಸ್ಟ್ ಹೆಮ್ಮಾಡಿ ಆಡಳಿತದಲ್ಲಿ ಹೊಸ ಕಲ್ಪನೆಯೊಂದಿಗೆ ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಏಪ್ರಿಲ್ 15 ರ ಸೋಮವಾರ ದಂದು ಶುಭಾರಂಭಗೊಳ್ಳಲಿದೆ.
ಈಗಾಗಲೇ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜನ್ನು ಮುನ್ನೆಡೆಸುವುದರ ಮೂಲಕ ಯಶಸ್ವಿಯಾಗಿರುವ ಗಣೇಶ ಮೊಗವೀರ ಅವರು ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಚುಕ್ಕಾಣಿಯನ್ನು ಹಿಡಿದಿದ್ದಾರೆ.ವಿಶಿಷ್ಟ ಆಲೋಚನೆಯೊಂದಿಗೆ ಆರಂಭಿಸಿರುವ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಆರಂಭದ ಎರಡೆ ವರ್ಷದಲ್ಲಿಯೆ ಶೇಕಡಾ 100 ಫಲಿತಾಂಶವನ್ನು ಗಳಿಸುವುದರ ಮೂಲಕ ಕುಂದಾಪುರ ತಾಲೂಕಿನಲ್ಲಿ ಐತಿಹಾಸಿಕ ದಾಖಲೆಯನ್ನು ಸೃಷ್ಟಿಸಿದೆ.ಶಿಕ್ಷಣ,ಕಲೆ,ಸಾಹಿತ್ಯ,ಕ್ರೀಡೆ,ಮನೋರಂಜನೆ ವಿಷಯದಲ್ಲಿ ದಾಖಲೆ ಪ್ರಶಸ್ತಿಗಳನ್ನು ಗಳಿಸುವುದರ ಮುಖೇನ ಕಾಲೇಜಿನ ವಿದ್ಯಾರ್ಥಿಗಳು.ಶಿಕ್ಷಣದ ಜತಗೆ ಪಠ್ಯೇತರ ವಿಚಾರದಲ್ಲಿಯೂ ಸೈ ಎನಿಸಿಕೊಂಡಿದ್ದಾರೆ.ಶಿಕ್ಷಣ ಕ್ಷೇತ್ರದಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಗಣೇಶ ಮೊಗವೀರ ಅವರ ಮುಂದಾಳತ್ವದಲ್ಲಿ ನಾವುಂದ ಶುಭದಾ ಆಂಗ್ಲ ಮಾಧ್ಯಮ ಶಾಲೆ ಹೊಸ ಮೈಲಿಗಲ್ಲು ಸೃಷ್ಟಿಸಲಿದೆ.
ಬಡತನದಲ್ಲಿ ಹುಟ್ಟಿದ ಗಣೇಶ ಮೊಗವೀರ ಅವರಿಗೆ ಕಷ್ಟಗಳು ಏನು ಹೊಸತಲ್ಲ,ಬದುಕಿಗೆ ಶಿಕ್ಷಣವೆ ಮುಖ್ಯ ಎಂದು ಭಾವಿಸಿರುವ ಅವರು ಕಷ್ಟದ ದಿನಗಳಲ್ಲಿಯೂ ಶಾಲೆಯ ಮೆಟ್ಟಿಲ್ಲನೇರಿ ಉನ್ನತ ಶಿಕ್ಷಣ ಪಡೆಯುವುದರ ಮೂಲಕ.ಊರಿನ ಮಕ್ಕಳಿಗೂ ಉತ್ತಮ ಶಿಕ್ಷಣ ಸಿಗಬೇಕು ಎನ್ನುವುದು ಅವರ ಮಹಾದಾಶೆ ಆಗಿದೆ.ಆವೊಂದು ನಿಟ್ಟಿನಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪೂರ್ವ ಕಾಲೇಜನ್ನು ಆರಂಭಿಸುವುದರ ಜತೆಗೆ ನಾವುಂದ ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಮುನ್ನೆಡೆಸಲು ಮುಂದುಡಿ ಇಟ್ಟಿದ್ದಾರೆ.ಈಗಾಲೆ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಗೆ ಗಣೇಶ ಮೊಗವೀರ ಸಾರಥ್ಯದಲ್ಲಿ ಇನ್ನಷ್ಟು ಹೊಳಪು ಬರಲಿದೆ.
ಹೆಮ್ಮಾಡಿ ಜನತಾ ಕಾಲೇಜಿನ ಅಧ್ಯಕ್ಷರು ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಮಾತನಾಡಿ,ಶುಭದಾ ಆಂಗ್ಲ ಮಾಧ್ಯ ಶಾಲೆ ಕಿರಿ ಮಂಜೇಶ್ವರ ಇವೊಂದು ಶೈಕ್ಷಣಿಕ ವರ್ಷದಲ್ಲಿ ಜನತಾ ಕಾಲೇಜು ಹೆಮ್ಮಾಡಿ ಸಮರ್ಪಣ ಎಜುಕೇಶನ್ ಟ್ರಸ್ಟ್ ವತಿಯಿಂದ ಇವೊಂದು ಶೈಕ್ಷಣಿಕ ವರ್ಷದಲ್ಲಿ ಆರಂಭಗೊಳ್ಳಲಿದೆ ಎಂದರು.ಹಲವಾರು ಬದಲಾವಣೆ ಗಳೊಂದಿಗೆ ಶಾಲೆ ಆರಂಭಗೊಳ್ಳಲಿದೆ.ಇವೊಂದು ಭಾಗದಲ್ಲಿ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಲಿ ಕಂಕಣ ಬದ್ದರಾಗಿದ್ದೇವೆ ಎಂದು ಹೇಳಿದರು.
ವರದಿ:-ಜಗದೀಶ ದೇವಾಡಿಗ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ:-9916284048

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago