ಮಹಿಳೆಗೆ ಕಾರು ಡಿಕ್ಕಿ,ಆಸ್ಪತ್ರೆಗೆ ದಾಖಲು
ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.
ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು ಜಿಲ್ಲಾಡಳಿತ ಮತ್ತು ರಸ್ತೆಯನ್ನು ಗುತ್ತಿಗೆ ಪಡೆದುಕೊಂಡಿದ್ದ ಐಆರ್ಬಿ ಕಂಪನಿ ಅವರು ವಾಹನ ಸವಾರರು ಮತ್ತು ಸಾರ್ವಜನಿಕರ ಜೀವದ ಹಿತ ದೃಷ್ಟಿಯಿಂದ ಯಾವುದೆ ರೀತಿ ಸುರಕ್ಷತಾ ಕ್ರಮಗಳನ್ನು ಕೈಂಗೊಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಹಂಪ್ ಅಳವಡಿಕೆಗೆ ಆಗ್ರಹ:ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಸಹಿತ ಹಂಪ್ ಅಳವಡಿಕೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.