ಕುಂದಾಪುರ:ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಾಡು-ಮುಳ್ಳಿಕಟ್ಟೆ ಸರ್ಕಲ್ನಲ್ಲಿ ನಾವುಂದ ಗ್ರಾಮದ ರೂಪ ಗಾಣಿಗ (32) ಅವರು ರಸ್ತೆ ದಾಟುತ್ತಿದ್ದ ಸಮಯದಲ್ಲಿ ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ವೇಗದಿಂದ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆ ದಾಖಲಾದ ಘಟನೆ ಶನಿವಾರ ನಡೆದಿದೆ.
ಏಪ್ರಿಲ್ 12 ರ ಶುಕ್ರವಾರದಂದು ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮಹಿಳೆಯರು ಸಹಿತ ಒಟ್ಟು ನಾಲ್ಕು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಮುಳ್ಳಿಕಟ್ಟೆ ಸರ್ಕಲ್ನಲ್ಲಿ ಪದೆ ಪದೆ ಅಪಘಾತ ಸಂಭವಿಸುತ್ತಿದ್ದರು ಜಿಲ್ಲಾಡಳಿತ ಮತ್ತು ರಸ್ತೆಯನ್ನು ಗುತ್ತಿಗೆ ಪಡೆದುಕೊಂಡಿದ್ದ ಐಆರ್ಬಿ ಕಂಪನಿ ಅವರು ವಾಹನ ಸವಾರರು ಮತ್ತು ಸಾರ್ವಜನಿಕರ ಜೀವದ ಹಿತ ದೃಷ್ಟಿಯಿಂದ ಯಾವುದೆ ರೀತಿ ಸುರಕ್ಷತಾ ಕ್ರಮಗಳನ್ನು ಕೈಂಗೊಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಹಂಪ್ ಅಳವಡಿಕೆಗೆ ಆಗ್ರಹ:ಮುಳ್ಳಿಕಟ್ಟೆ ಸರ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಸಹಿತ ಹಂಪ್ ಅಳವಡಿಕೆ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…