ಕುಂದಾಪುರ

ಸಮುದ್ರ ನೀರಾಜನ ಪೂಜೆ, ಸಮುದ್ರ ರಾಜನಿಗೆ ಸಾಗರೇಶ್ವರ ಪೂಜೆ ಸಮರ್ಪಣೆ

Share

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಅಂಗವಾಗಿ ಹಾಗೂ ಮಸ್ತ್ಯ ಸಮೃದ್ಧಿಗಾಗಿ ಸಮುದ್ರ ನೀರಾಜನ,ಸಾಗರೇಶ್ವರ ಪೂಜೆಯನ್ನು ಡಾ.ಎ ಚೆನ್ನಕೇಶವ ಗಾಯತ್ರಿ ಭಟ್ ಗಜಪುರ ಆನಗಳ್ಳಿ ಅವರ ಮುಂದಾಳತ್ವದಲ್ಲಿ,ಭವ್ಯ ವೇದಿಕೆಯಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ಸಮುದ್ರ ರಾಜನಿಗೆ ಆರತಿ ಬೆಳಗಿ ಪೂಜೆಯನ್ನು ಸಲ್ಲಿಸಲಾಯಿತು.ಸಹಸ್ರಾರು ಭಕ್ತರು ಸಾಗರೇಶ್ವರ ಪೂಜೆಯಲ್ಲಿ ಭಾಗವಹಿಸಿದ್ದರು.
ಸಮುದ್ರ ನೀರಾಜನ ಸಾಗರೇಶ್ವರ ಪೂಜೆ ಅಂಗವಾಗಿ
ಶ್ರೀರಾಮ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಹೋಮ,ಭಜನಾ ಕಾರ್ಯಕ್ರಮ,ಅನ್ನಸಂತರ್ಪಣೆ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.
ಶ್ರೀನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ ನರಸೀಪುರ ಹಾವೇರಿ ಜಗದ್ಗುರು ಶ್ರೀಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳವರ ದಿವ್ಯ ಉಪಸ್ಥಿತಿಯಲ್ಲಿ ಅಷ್ಟಾವಧಾನ ಸೇವೆ,ಗುರುಉಪದೇಶಾಮೃತ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.
ಜಗದ್ಗುರು ಶ್ರೀ ಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ ಮಾತನಾಡಿ,ನೂರಾರು ನದಿಗಳನ್ನು ಆರಾಧನೆ ಮಾಡುವುದು ಕಷ್ಟದಾಯಕವಾಗಿದೆ.ಎಲ್ಲಾ ನದಿಗಳು ಸೇರುವುದು ಸಮುದ್ರದಲ್ಲಿ ಹಾಗಾಗಿ ಸಮುದ್ರ ಪೂಜೆಯನ್ನು ನೆರವೇರಿಸಲಾಗುತ್ತದೆ ಎಂದು ಸಮುದ್ರ ನೀರಾಜನ ಪೂಜೆಯ ಮಹತ್ವವನ್ನು ವಿವರಿಸಿದರು.ಗಂಗಾ ಮಾತೆ ಆಶೀರ್ವಾದ ಮೀನುಗಾರರ ಮೇಲೆ ಸದಾ ಇರುತ್ತದೆ, ಸಮುದ್ರ ನೀರಾಜನ ಪೂಜೆಯಿಂದ ಸಂತುಷ್ಟನಾದ ಸಮುದ್ರ ರಾಜನು ಒಳ್ಳೆಯದು ಮಾಡಲಿದ್ದಾನೆ ಎಂದು ಹೇಳಿದರು.
ಅಂಬಿಗರ ಚೌಡಯ್ಯ ಅವರ ಮಹಿಮೆ ಅಪಾರವಾದದ್ದು ಈ ಭಾಗದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡಲು ಮುನ್ನೇಡೆಯ ಬೇಕು ಎಂದು ಹೇಳಿದರು.
ಸ್ವಾಮಿಗಳು ಆಶೀರ್ವಚನ ನೀಡಿದ ಬಳಿಕ ಮೆರವಣಿಗೆ ಮೂಲಕ ಸಮುದ್ರ ಕಿನಾರೆ ಬಳಿ ತೆರಳಿ ಸಾಗರೇಶ್ವರ ಪೂಜೆಯನ್ನು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು.ಭಕ್ತರು ಭಕ್ತಿಯಲ್ಲಿ ಮಿಂದೆದ್ದರು, ವಿದ್ಯುತ್ ದೀಪ,ಸೂಡು ಮದ್ದು ಪ್ರದರ್ಶನ ನೊಡುಗರ ಮನ ಸೆಳೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು,ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷರು ಮತ್ತು ಗೌರವಾಧ್ಯಕ್ಷರು,ಮಹಿಳಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago