ಕುಂದಾಪುರ:ಹದಿನಾರು ಮಾಗಣೆಯ ಒಡೆಯನಾದ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವರ ಶ್ರೀಮನ್ಮಹಾರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವದಿಂದ ಬುಧವಾರ ನಡೆಯಿತು.ಭಕ್ತಿಭಾವದಿಂದ ಭಕ್ತಾದಿಗಳು ರಥವನ್ನು ಎಳೆದರು.ಚಂಡೆ ವಾದನ,ವಾದ್ಯಘೋಷ ರಥೋತ್ಸವದ ಸೊಬಗನ್ನು ಹೆಚ್ಚಿಸಿತು.
ಶ್ರೀ ಲಕ್ಷ್ಮೀಚೆನ್ನಕೇಶವ ದೇವರ ಮನ್ಮಹಾರಥೋತ್ಸವ ಕಾರ್ಯಕ್ರಮದ ಅಂಗವಾಗಿ ವಾಸ್ತು ರಾಕ್ಷೋಘ್ನ ಹೋಮ,ಬಲಿ ಉತ್ಸವ,ಕಟ್ಟೆ ಪೂಜೆ,ಧ್ವಜಾರೋಹಣ,ಪ್ರಧಾನ ಹೋಮ,ಮಹಾಪೂಜೆ ಅನ್ನಪ್ರಸಾದ ಸೇವೆ ಮಹಾ ರಂಗಪೂಜೆ.ಹಟ್ಟಿಯಂಗಡಿ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಜರುಗಿತು.ಏಪ್ರಿಲ್.18 ರಂದು ಚೂರ್ಣೋತ್ಸವ,ಏಪಿಲ್ 19 ರಂದು ಶುಕ್ರವಾರ ಅವಭೃತ ತೆಪೆÇೀತ್ಸವ ಕಾರ್ಯಕ್ರಮ ವೈಭವದಿಂದ ನಡೆಯಲಿದೆ.
ಹಿರಿಯರಾದ ಗಣಪ್ಪಯ್ಯ ಶೆಟ್ಟಿ ಮಾತನಾಡಿ,11ನೇ ಶತಮಾನದಲ್ಲಿ ಸ್ಥಾಪನೆಯಾದ ಶ್ರೀಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವಸ್ಥಾನವನ್ನು ಕಮಿಟಿ ಅವರ ಸಹಕಾರದಿಂದ ಹಂತ ಹಂತವಾಗಿ ಜೀರ್ಣೋದ್ಧಾರ ಮಾಡಲಾಗಿದೆ.ದೇವಸ್ಥಾನದ ಕೆರೆ ಅಭಿವೃದ್ಧಿ ಸಹಿತ ಬಹಳಷ್ಟು ಕಾರ್ಯಗಳು ಬಾಕಿ ಇದ್ದು,ದಾನಿಗಳು,ಗ್ರಾಮಸ್ಥರು,ಜನಪ್ರತಿನಿಧಿಗಳು ಸಹಕಾರವನ್ನು ನೀಡಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ಸತೀಶ್ ಶೆಟ್ಟಿ ಯಳೂರು ಮಾತನಾಡಿ,16 ಮಾಗಣೆಯನ್ನು ಹೊಂದಿರುವ ಮಾಣಿಕೊಳಲು ಶ್ರೀಚೆನ್ನಕೇಶವ ದೇವರ ಕಾರಣಿಕ ಶಕ್ತಿ ಅಪಾರವಾದದ್ದು.ಸಂಪ್ರದಾಯ ಬದ್ಧವಾಗಿ ಪ್ರತಿ ವರ್ಷ ಶ್ರೀದೇವರ ರಥೋತ್ಸವ ಕಾರ್ಯಕ್ರಮ ದಾನಿಗಳು,ಊರವರ ಸಹಕಾರದಿಂದ ನಡೆಯುತ್ತಿದೆ ಎಂದರು.ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳು ಇನ್ನಷ್ಟು ಬಾಕಿ ಉಳಿದಿದ್ದು ಶ್ರೀಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ವಿನಂತಿಸಿಕೊಂಡರು.
ದೇವಸ್ಥಾನದ ಅಧ್ಯಕ್ಷರಾದ ಎಚ್.ಜಗದೀಶಯ್ಯ ಹಲ್ಸನಾಡು ಅವರು ಶುಭಕೋರಿದರು.ಈ ಸಂದರ್ಭದಲ್ಲಿ ಲಕ್ಷ್ಮೀನಾರಾಯಣ ಹೆಬ್ಬಾರ್,ವಿಶ್ವನಾಥ ಗಾಣಿಗ,ಕೃಷ್ಣ ಪೂಜಾರಿ,ಚಂದ್ರಹಾಸ ಹೊಳ್ಮಗೆ,ಸುಧಾಕರ ಕೊಳೂರು,ಹೇಮಾವತಿ ಆಚಾರ್ಯ,ಶುಭಮತಿ ದೇವಾಡಿಗ ಮಾಣಿಕೊಳಲು,ಅರ್ಚಕರಾದ ಗುರುರಾಜ ಉಡುಪ,ಚಂದ್ರಶೇಖರ ಉಪಾಧ್ಯ,ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…