ಕುಂದಾಪುರ:ಹದಿನಾರು ಮಾಗಣೆಯ ಒಡೆಯನಾದ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವರ ಶ್ರೀಮನ್ಮಹಾರಥೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವೈಭವದಿಂದ ಬುಧವಾರ ನಡೆಯಿತು.ಭಕ್ತಿಭಾವದಿಂದ ಭಕ್ತಾದಿಗಳು ರಥವನ್ನು ಎಳೆದರು.ಚಂಡೆ ವಾದನ,ವಾದ್ಯಘೋಷ ರಥೋತ್ಸವದ ಸೊಬಗನ್ನು ಹೆಚ್ಚಿಸಿತು.
ಶ್ರೀ ಲಕ್ಷ್ಮೀಚೆನ್ನಕೇಶವ ದೇವರ ಮನ್ಮಹಾರಥೋತ್ಸವ ಕಾರ್ಯಕ್ರಮದ ಅಂಗವಾಗಿ ವಾಸ್ತು ರಾಕ್ಷೋಘ್ನ ಹೋಮ,ಬಲಿ ಉತ್ಸವ,ಕಟ್ಟೆ ಪೂಜೆ,ಧ್ವಜಾರೋಹಣ,ಪ್ರಧಾನ ಹೋಮ,ಮಹಾಪೂಜೆ ಅನ್ನಪ್ರಸಾದ ಸೇವೆ ಮಹಾ ರಂಗಪೂಜೆ.ಹಟ್ಟಿಯಂಗಡಿ ಮೇಳದವರಿಂದ ಯಕ್ಷಗಾನ ಕಾರ್ಯಕ್ರಮ ಜರುಗಿತು.ಏಪ್ರಿಲ್.18 ರಂದು ಚೂರ್ಣೋತ್ಸವ,ಏಪಿಲ್ 19 ರಂದು ಶುಕ್ರವಾರ ಅವಭೃತ ತೆಪೆÇೀತ್ಸವ ಕಾರ್ಯಕ್ರಮ ವೈಭವದಿಂದ ನಡೆಯಲಿದೆ.
ಹಿರಿಯರಾದ ಗಣಪ್ಪಯ್ಯ ಶೆಟ್ಟಿ ಮಾತನಾಡಿ,11ನೇ ಶತಮಾನದಲ್ಲಿ ಸ್ಥಾಪನೆಯಾದ ಶ್ರೀಮಾಣಿಕೊಳಲು ಶ್ರೀಲಕ್ಷ್ಮೀಚೆನ್ನಕೇಶವ ದೇವಸ್ಥಾನವನ್ನು ಕಮಿಟಿ ಅವರ ಸಹಕಾರದಿಂದ ಹಂತ ಹಂತವಾಗಿ ಜೀರ್ಣೋದ್ಧಾರ ಮಾಡಲಾಗಿದೆ.ದೇವಸ್ಥಾನದ ಕೆರೆ ಅಭಿವೃದ್ಧಿ ಸಹಿತ ಬಹಳಷ್ಟು ಕಾರ್ಯಗಳು ಬಾಕಿ ಇದ್ದು,ದಾನಿಗಳು,ಗ್ರಾಮಸ್ಥರು,ಜನಪ್ರತಿನಿಧಿಗಳು ಸಹಕಾರವನ್ನು ನೀಡಬೇಕೆಂದು ಕೇಳಿಕೊಂಡರು.
ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ಸತೀಶ್ ಶೆಟ್ಟಿ ಯಳೂರು ಮಾತನಾಡಿ,16 ಮಾಗಣೆಯನ್ನು ಹೊಂದಿರುವ ಮಾಣಿಕೊಳಲು ಶ್ರೀಚೆನ್ನಕೇಶವ ದೇವರ ಕಾರಣಿಕ ಶಕ್ತಿ ಅಪಾರವಾದದ್ದು.ಸಂಪ್ರದಾಯ ಬದ್ಧವಾಗಿ ಪ್ರತಿ ವರ್ಷ ಶ್ರೀದೇವರ ರಥೋತ್ಸವ ಕಾರ್ಯಕ್ರಮ ದಾನಿಗಳು,ಊರವರ ಸಹಕಾರದಿಂದ ನಡೆಯುತ್ತಿದೆ ಎಂದರು.ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳು ಇನ್ನಷ್ಟು ಬಾಕಿ ಉಳಿದಿದ್ದು ಶ್ರೀಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ವಿನಂತಿಸಿಕೊಂಡರು.
ದೇವಸ್ಥಾನದ ಅಧ್ಯಕ್ಷರಾದ ಎಚ್.ಜಗದೀಶಯ್ಯ ಹಲ್ಸನಾಡು ಅವರು ಶುಭಕೋರಿದರು.ಈ ಸಂದರ್ಭದಲ್ಲಿ ಲಕ್ಷ್ಮೀನಾರಾಯಣ ಹೆಬ್ಬಾರ್,ವಿಶ್ವನಾಥ ಗಾಣಿಗ,ಕೃಷ್ಣ ಪೂಜಾರಿ,ಚಂದ್ರಹಾಸ ಹೊಳ್ಮಗೆ,ಸುಧಾಕರ ಕೊಳೂರು,ಹೇಮಾವತಿ ಆಚಾರ್ಯ,ಶುಭಮತಿ ದೇವಾಡಿಗ ಮಾಣಿಕೊಳಲು,ಅರ್ಚಕರಾದ ಗುರುರಾಜ ಉಡುಪ,ಚಂದ್ರಶೇಖರ ಉಪಾಧ್ಯ,ಗ್ರಾಮಸ್ಥರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…