ಶ್ರೀಲಕ್ಷ್ಮೀನಾರಾಯಣ ದೇವರ ವೈಭವದ ಹೊರೆ ಕಾಣಿಕೆ ಪುರಮೆರವಣಿಗೆ
ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನದ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಂಭಾಭಿಷೇಕ ಮಹೋತ್ಸವ ಅಂಗವಾಗಿ ವೈಭವದ ಹೊರೆ ಕಾಣಿಕೆ ಶೋಭಾಯಾತ್ರೆ ಶುಕ್ರವಾರ ನಡೆಯಿತು.
ಪೂರ್ಣ ಕುಂಭ ಸ್ವಾಗತದೊಂದಿಗೆ ಶ್ರೀ ದೇವರ ಹೊರೆ ಕಾಣಿಕೆ ಮೆರವಣಿಗೆಯನ್ನು ಸ್ವಾಗತಿಸಿಕೊಳ್ಳಲಾಯಿತು.ಚಂಡೆ ವಾದನ,ವಾದ್ಯ ಘೋಷ,ಭಜನೆ ಮೆರವಣಿಗೆ ಸೊಬಗನ್ನು ಹೆಚ್ಚಿಸಿತು.ಮಹಿಳೆಯರು ಮತ್ತು ಪುರುಷರು ಸಮವಸ್ತ್ರದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದರು.