ಮಂಗಳೂರು

ಸರಣಿ ಅಪಘಾತ,ವಾಹನ,ಅಂಗಡಿಗಳಿಗೆ ಗುದ್ದಿದ ಮಣ್ಣು ಸಾಗಾಟದ ಲಾರಿ

Share

ಮಂಗಳೂರು:ಕೆಂಪು ಮಣ್ಣು ಸಾಗಾಟದ ಲಾರಿಯೊಂದು ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ವೇಗದಿಂದ ಬರುತ್ತಿದ್ದ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಎಡಪದವು ಜಂಕ್ಷನ್ ಬಳಿ ಮೂಡುಬಿದಿರೆ ಕಡೆಯಿಂದ ಆಗಮಿಸಿದೆ. ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ದಂತ ಚಿಕಿತ್ಸಾಲಯ ಸಹಿತ ಹಲವು ಅಂಗಡಿ ಕಟ್ಟಡಗಳಿಗೆ ಗುದ್ದಿ ಭಾರೀ ಹಾನಿ ಸಂಭವಿಸಿದೆ.ಈ ನಡುವೆ ಅಂಗಡಿ-ಮುಂಗಟ್ಟುಗಳ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಹಲವು ದ್ವಿಚಕ್ರ ವಾಹನಗಳು ಸೇರಿದಂತೆ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಹಲವು ದ್ವಿಚಕ್ರ ವಾಹನಗಳು ನುಜ್ಜು ಗುಜ್ಜಾಗಿವೆ.ಕಾರು ಕೂಡಾ ಜಖಮ್ ಗೊಂಡಿದ್ದು ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ.
ಅಪಘಾತದ ತೀವ್ರತೆಗೆ ಲಾರಿ , ಬಸ್ಸು ,ಟ್ಯಾಂಕರ್ ಹಾಗೂ ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಗಾಯಗಳಾಗಿವೆ.ಸರಣಿ ಅಪಘಾತ ನಡೆಸಿದ ಲಾರಿ ಅಂತಿಮವಾಗಿ ಪಲ್ಟಿಯಾಗಿದ್ದು ಲಾರಿಯ ಬ್ರೇಕ್ ಫೇಲ್ ಆಗಿರುವುದೇ ಕಾಲಣ ಎನ್ನಲಾಗಿದೆ.
ಮೂರು ಅಂಗಡಿಗಳಿಗೆ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅದೃಷ್ಟವಶಾತ್ ಅಪಘಾತದಲ್ಲಿ ಸಾವು ನೋವು ಸಂಭವಿಸಿಲ್ಲ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago