ಮಂಗಳೂರು:ಕೆಂಪು ಮಣ್ಣು ಸಾಗಾಟದ ಲಾರಿಯೊಂದು ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವು ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
ವೇಗದಿಂದ ಬರುತ್ತಿದ್ದ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಎಡಪದವು ಜಂಕ್ಷನ್ ಬಳಿ ಮೂಡುಬಿದಿರೆ ಕಡೆಯಿಂದ ಆಗಮಿಸಿದೆ. ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ದಂತ ಚಿಕಿತ್ಸಾಲಯ ಸಹಿತ ಹಲವು ಅಂಗಡಿ ಕಟ್ಟಡಗಳಿಗೆ ಗುದ್ದಿ ಭಾರೀ ಹಾನಿ ಸಂಭವಿಸಿದೆ.ಈ ನಡುವೆ ಅಂಗಡಿ-ಮುಂಗಟ್ಟುಗಳ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಹಲವು ದ್ವಿಚಕ್ರ ವಾಹನಗಳು ಸೇರಿದಂತೆ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಹಲವು ದ್ವಿಚಕ್ರ ವಾಹನಗಳು ನುಜ್ಜು ಗುಜ್ಜಾಗಿವೆ.ಕಾರು ಕೂಡಾ ಜಖಮ್ ಗೊಂಡಿದ್ದು ಕಾರಿನಲ್ಲಿದ್ದವರಿಗೆ ಗಾಯಗಳಾಗಿವೆ.
ಅಪಘಾತದ ತೀವ್ರತೆಗೆ ಲಾರಿ , ಬಸ್ಸು ,ಟ್ಯಾಂಕರ್ ಹಾಗೂ ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಗಾಯಗಳಾಗಿವೆ.ಸರಣಿ ಅಪಘಾತ ನಡೆಸಿದ ಲಾರಿ ಅಂತಿಮವಾಗಿ ಪಲ್ಟಿಯಾಗಿದ್ದು ಲಾರಿಯ ಬ್ರೇಕ್ ಫೇಲ್ ಆಗಿರುವುದೇ ಕಾಲಣ ಎನ್ನಲಾಗಿದೆ.
ಮೂರು ಅಂಗಡಿಗಳಿಗೆ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಬಜಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅದೃಷ್ಟವಶಾತ್ ಅಪಘಾತದಲ್ಲಿ ಸಾವು ನೋವು ಸಂಭವಿಸಿಲ್ಲ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…