ಕುಂದಾಪುರ

ಚಿಣ್ಣರ ಕಲರವ 2024,ಬೇಸಿಗೆ ಶಿಬಿರ ಉದ್ಘಾಟನೆ

Share

ಕುಂದಾಪುರ:ಚಿಣ್ಣರ ಕಲರವ 2024 ಬೇಸಿಗೆ ಶಿಬಿರ ಕಾರ್ಯಕ್ರಮ ರಾಘವೇಂದ್ರ ಅವರ ನಿರ್ದೇಶನದಲ್ಲಿ ನಾಗೂರು ಕೃಷ್ಣ ಲಲಿತ ಕಲಾಮಂದಿರದಲ್ಲಿ ಶನಿವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಚಿಣ್ಣರ ಕಲರವ ಬೇಸಿಗೆ ಶಿಬಿರದಲ್ಲಿ ವಿದ್ಯಾಥಿಗಳಿಗೆ ಮುಖವಾಡ ತಯಾರಿಕೆ,ಕವನ ಕಟ್ಟುವುದು,ಪೇಪರ್ ಕ್ರಾಫ್ಟ್,ಬಣ್ಣಗಳ ಜೊತೆ ಆಟ,ಹಾಡು ಪಾಡು ಎಂಬ ವಿಷಯದ ಬಗ್ಗೆ ತರಬೇತಿಯನ್ನು ನೀಡಲಾಯಿತು.ವಿಶೇಷ ಆರ್ಕಷಣೆಯ ಜಾದು ವಿಷ್ಮಯವನ್ನು ಪ್ರದರ್ಶಿಸಲಾಯಿತು.
ರತ್ನಾಕರ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಶಿಕ್ಷಣದ ಜತೆಗೆ ಬೇರೆ ಬೇರೆ ರೀತಿಯ ತರಬೇತಿ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಉತ್ತಮವಾದ ಬೆಳವಣಿಗೆಯನ್ನು ಕಾಣಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.
ಶಿಬಿರದ ನಿರ್ದೇಶಕರಾದ ರಾಘವೇಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ,ಮಕ್ಕಳ ಭವಿಷ್ಯದಲ್ಲಿ ವ್ಯಕ್ತಿತ್ವ ವಿಕಾಸನಗೊಳಿಸಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಪ್ರಯೋಜನಾಕಾರಿ ಆಗಿರುತ್ತದೆ ಎಂದು ಹೇಳಿದರು.ಇವೊಂದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು.
ಡಾ.ಪ್ರವೀಣ್ ಶೆಟ್ಟಿ ಮಾತನಾಡಿ,ಯಾವುದೇ ರೀತಿಯ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲು ಅದರ ಹಿಂದೆ ಬಹಳಷ್ಟು ಶ್ರಮ ಅಡಗಿರುತ್ತದೆ.ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳಿಗೆ ಒಂದಿಷ್ಟು ತರಬೇತಿಯನ್ನು ನೀಡಿ ಅವರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಬೇಸಿಗೆ ಶಿಬಿರದ ಪ್ರಯೋಜನೆ ಮಕ್ಕಳಿಗೆ ದೊರಕಲಿ ಎಂದು ಹೇಳಿದರು.
ಮಂಜುನಾಥ ಕಾರಂತ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.ಶಿಕ್ಷಕರಾದ ದಿನೇಶ.ವಿ ಮತ್ತು ಶೇಖರ ದೇವಾಡಿ ಅವರು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು.ಈ ಸಂದರ್ಭದಲ್ಲಿ ವಂದನಾ,ವಸಂತಿ,ಚೇತನ,ಶಿಕ್ಷಕರಾದ ಸುರೇಶ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago