ಕುಂದಾಪುರ

ಏಪ್ರಿಲ್ 22 ರಂದು ಮಹಿಳಾ ಸಮಾವೇಶ,ಬೂತ್ ಕಡೆಗೆ ಸಮೃದ್ಧಿ ನಡಿಗೆ

Share

ಬೈಂದೂರು:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏಪ್ರಿಲ್ 22ರಂದು ಸೋಮವಾರ ಬೈಂದೂರಿಗೆ ಆಗಮಿಸಿ ದಿನವಿಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿ.ವೈ.ರಾಘವೇಂದ್ರ ಅವರು ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೊದಲ ಬಾರಿಗೆ ಬೈಂದೂರಿಗೆ ಆಗಮಿಸುತ್ತಿದ್ದಾರೆ. ರಾಘವೇಂದ್ರ ಅವರನ್ನು ಸ್ವಾಗತಿಸಲು ಕಾರ್ಯಕರ್ತರು ಪದಾಧಿಕಾರಿಗಳು ಕಾತರರಾಗಿದ್ದಾರೆ.
ಮಹಿಳಾ ಸಮಾವೇಶ
ಎ.22ರ ಬೆಳಗ್ಗೆ 10.30ಕ್ಕೆ ಕಿರಿಮಂಜೇಶ್ವರ ಮೂಕಾಂಬಿಕಾ ಟಿಂಬರ್ ಮಿಲ್ ಸಮೀಪದಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ ಮಹಿಳಾ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ. ಶಾಸಕರಾದ ಗುರುರಾಜ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ, ನಟಿ ಶ್ರುತಿ, ಶಿವಮೊಗ್ಗ ಬಿಜೆಪಿ ಉಪಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು, ಬಿ.ಎಸ್. ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮೊದಲಾದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ದೇವಸ್ಥಾನ ಭೇಟಿ
ಅಲ್ಲಿಂದ ಮಧ್ಯಾಹ್ನ 12.30ಕ್ಕೆ ಹಳಗೆರಿಯ ಶ್ರೀ ಕಾಲ ಭೈರವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಸ್ಥಳೀಯ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಲಿದ್ದಾರೆ. ಅಲ್ಲಿಂದ ಶಿರೂರು ಕಡೆಗೆ ಪಯಾಣ ಬೆಳೆಸಲಿದ್ದಾರೆ.
ಮಧ್ಯಾಹ್ನ 3ಕ್ಕೆ ಕಂಚಗೋಡು ಶ್ರೀ ರಾಮ ಮಂದಿರಕ್ಕೆ ಭೇಟಿ, ಮಧ್ಯಾಹ್ನ 3.30ಕ್ಕೆ ಹೆಮ್ಮಾಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ, ಸಂಜೆ 4ಕ್ಕೆ ಬಗ್ವಾಡಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.30ಕ್ಕೆ ಅಂಪಾರುವಿನಲ್ಲಿ ನಡೆಯುವ ಶ್ರೀ ನಾಗಮಂಡಲೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಎಸ್.ಟಿ. ಸಮಾವೇಶ
ಸಂಜೆ 6 ಗಂಟೆಗೆ ತಗ್ಗರ್ಸೆ ಗುಡ್ಡಿಯಂಗಡಿಯಲ್ಲಿ ಮಂಡಲ ಬಿಜೆಪಿ ಎಸ್ ಟಿ ಮೋರ್ಚಾದಿಂದ ನಡೆಯುವ ಎಸ್.ಟಿ. ಸಮಾವೇಶದಲ್ಲಿ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಲಿದ್ದಾರೆ.
ಅಂದು ಬಿ.ವೈ. ರಾಘವೇಂದ್ರ ಅವರೊಂದಿಗೆ ಶಾಸಕರಾದ ಶ್ರೀ ಗುರುರಾಜ ಗಂಟಿಹೊಳೆ, ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸೇರಿದಂತೆ ಮಂಡಲದ ಪದಾಧಿಕಾರಿಗಳು ಜತೆಗಿರಲಿದ್ದಾರೆ.
ಚುನಾವಣೆ ಕಾರ್ಯಕ್ಕೆ ವೇಗ ನೀಡಲು ಮತ್ತು ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ಕೊಡಿಸಲು ಶಾಸಕರಾದ ಗುರುರಾಜ ಗಂಟಿಹೊಳೆಯವರು ಈಗಾಗಲೇ ಬೂತ್ ಕಡೆಗೆ-ಸಮೃದ್ಧಿ ನಡಿಗೆ ಕಾರ್ಯಕ್ರಮದ ಮೂಲಕ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ಮಾಡುತ್ತಿದ್ದಾರೆ. ನಿರಂತರ ಬೂತ್ ನಡಿಗೆಯ ಮೂಲಕ ಚುನಾವಣಾ ಕಾರ್ಯದಲ್ಲಿ ಕಾರ್ಯಕರ್ತರಿಗೆ, ಮುಖಂಡರಿಗೆ ಉತ್ಸಾಹ, ಹುಮ್ಮಸ್ಸು ತುಂಬುತ್ತಿದ್ದಾರೆ. ಈ ಮಧ್ಯೆ ಬಿ.ವೈ. ರಾಘವೇಂದ್ರ ಅವರು ಬೈಂದೂರಿಗೆ ಆಗಮಿಸುತ್ತಿರುವುದು ಮುಖಂಡರು, ನಾಯಕರು ಹಾಗೂ ಕಾರ್ಯಕರ್ತರಲ್ಲಿ ಚುನಾವಣ ಪ್ರಚಾರದ ಉತ್ಸಾಹ ಇನ್ನಷ್ಟು ಹೆಚ್ಚಲಿದೆ ಎಂದು ಮಂಡಲ ಬಿಜೆಪಿ ಪ್ರಕಟನೆ ತಿಳಿಸಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago