ಕುಂದಾಪುರ

ಏಪ್ರಿಲ್ 21 ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ

Share

ಕುಂದಾಪುರ:ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಆದಿ ನಾಗ ಬನದಲ್ಲಿ ಏಪ್ರಿಲ್ 23 ರ ಮಂಗಳವಾರ ದಂದು ನಡೆಯಲಿರುವ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21 ರ ಭಾನುವಾರದಂದು ಹಸಿರು ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ನಾಗಮಂಡಲೋತ್ಸವ ಸಮಿತಿ ಅವರು ವಿನಂತಿಸಿಕೊಂಡಿದ್ದಾರೆ.
ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಅದ್ದೂರಿಯಾಗಿ ನಡೆಯುತ್ತಿದ್ದು,ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ತಳಿರು ತೋರಣಗಳಿಂದ,ಸುಣ್ಣ ಬಣ್ಣ ಲೇಪನ ದೊಂದಿಗೆ ಮಂಟಪವನ್ನು ಸಿಂಗರಿಸಲಾಗಿದೆ.ತುಂಬು ಉತ್ಸಾಹದಿಂದ ಗ್ರಾಮಸ್ಥರು ಕೆಲಸ ಕಾರ್ಯಗಳಲ್ಲಿ ತೊಡಗಿ ಕೊಂಡಿದ್ದಾರೆ.
ಏಪ್ರಿಲ್ 23 ನಡೆಯಲಿರುವ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಅಂಗವಾಗಿ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.
ಹೊರೆ ಕಾಣಿಕೆ ಸಲ್ಲಿಸ ಬಯಸುವವರು ಎಪ್ರಿಲ್ 21 ರಿಂದ ಏಪ್ರಿಲ್ 22 ರ ವರೆಗೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ನೀಡಬಹುದು ಎಂದು ಆಯೋಜಕರು ತಿಳಿಸಿದ್ದಾರೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago