ಕುಂದಾಪುರ:ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯಗುಡಿ ಲೋಕಾರ್ಪಣೆ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠಾ ಮಹೋತ್ಸೊವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಶ್ರೀಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಗುರುಗಣೇಶ ಪೂಜೆ,ಪುಣ್ಯಾಹವಾಚನ,ನವಗ್ರಹ ಧಾನ್ಯ ದಾನ,ಫಲದಾನ,ಜೀವಕುಭಾಭಿಷೇಕ,ಮಹಾಪ್ರಣ,ಪ್ರತಿಷ್ಠಾನ್ಯಾಸಾದಿಗಳು,ತತ್ತ್ವಕಲಶ ಸ್ಥಾಪನಾ,ಲಕ್ಷ್ಮೀನಾರಾಯಣ ಹೃದಯ ಹೋಮ,ಮಹಾಪೂಜಾ,ಪ್ರಸಾದ ವಿತರಣೆ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಶ್ರೀಲಕ್ಷ್ಮೀನಾರಾಯಣ ದೇವರಿಗೆ ಅಲಂಕಾರ ಪೂಜೆ ಮತ್ತು ಮಹಾಮಂಗಳಾರತಿ ಹಾಗೂ ಶಿಖರ ಪ್ರತಿಷ್ಠೆಯನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕುಂಭಾಭಿಷೇಕ ಮಹೋತ್ಸವ ಸಮಿತಿ ಅಧ್ಯಕ್ಷ ಕುಶಲ ಶೆಟ್ಟಿ ನಗು ಗ್ರೂಪ್ ಕುಂದಾಪುರ ಮತ್ತು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಷ್ಠ ಶಿಲ್ಪದಿಂದ ಕಂಗೊಳಿಸುತ್ತಿರುವ ಶ್ರೀಲಕ್ಷ್ಮೀನಾರಾಯಣ ದೇವಾಲಯ:ಹೆಮ್ಮಾಡಿ ಶ್ರೀಲಕ್ಮೀ ನಾರಾಯಣ ದೇವಸ್ಥಾನವು ಇತಿಹಾಸಕಾರರ ಅಧ್ಯಯನದಂತೆ 11ನೇ ಶತಮಾನದಲ್ಲಿ ಹೇಮಂತ ಅರಸನಿಂದ ಸ್ಥಾಪಿಸಲಾಗಿದೆ ಎನ್ನುವ ಐತಿಹ್ಯವಿದೆ.ನೂತನ ಶಿಲಾಮಯಗುಡಿ ನೋಡುಗರ ಮನ ಸೆಳೆತಯುತ್ತಿದ್ದು,ಕಾಷ್ಠ ಶಿಲ್ಪದೊಂದಿಗೆ ಕಂಗೊಳಿಸುತ್ತಿದೆ.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…