ಅಂಪಾರು:ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಶ್ರಿ ಆದಿ ನಾಗ ದೇವರ ಸನ್ನಿಧಿಯಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಗಣಪತಿ ಪೂಜೆ, ದರ್ಶನ ಸೇವೆ,ಮಹಾ ಅನ್ನಸಂತರ್ಪಣೆ ಜರಗಿತು ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.ಗ್ರಾಮ ದೇವತೆ,ಅಡಿ ದೇವತೆಗಳಿಗೆ ಫಲ ಸಮರ್ಪಣೆ ಕಾರ್ಯಕ್ರಮ ನಡೆಯಿತು.ಆಶ್ಲೇಷಾ ಬಲಿ,ಮಂಡಲ ಮಂಟಪದಲ್ಲಿ ವಾಸ್ತು ರಾಕ್ಷೋಷ್ನ ಬಲಿ ಜರುಗಿತು.
ಶಾನ್ಕಟ್ಟು ಕೆಳಗಿನ ಮನೆ ರಾಘವೇಂದ್ರ ಶೆಟ್ಟಿ ಮಾತನಾಡಿ, ಕೆಳಗಿನ ಮನೆ ಕುಟುಂಬಸ್ಥರ ವತಿಯಿಂದ ಏಕ ಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ನಡೆದಿದೆ ಎಂದು ಹೇಳಿದರು.ಸಂತಾನ ಕಾರಕನಾದ ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷಾ ಬಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದಿದೆ ಎಂದು ಹೇಳಿದರು.
ದಿವಾಕರ ಶೆಟ್ಟಿ ಮಾತನಾಡಿ,108 ವರ್ಷಗಳ ಹಿಂದೆ ಸಂತಾನ ಪ್ರಾಪ್ತಿಗಾಗಿ ಹೇಳಿಕೊಂಡಿರುವ ನಾಗಮಂಡಲೋತ್ಸವ ಹರಕೆಯನ್ನು ಕುಟುಂಬಸ್ಥರ ಕೂಡುವಿಕೆಯಿಂದ ದೇವರಿಗೆ ಸಮರ್ಪಣೆ ಮಾಡಲಾಗಿದೆ ಎಂದರು.ಶ್ರೀ ನಾಗದೇವರು ಕುಟುಂಬಸ್ಥರಿಗೂ, ಗ್ರಾಮಸ್ಥರಿಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.
ಚಂದ್ರ ಜೋಗಿ ಶಾನ್ಕಟ್ಟು ಮಾತನಾಡಿ,
ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹೊರೆ ಕಾಣಿಕೆ ಗ್ರಾಮಸ್ಥರ ಸಹಕಾರದಿಂದ ವಿಜೃಂಭಣೆಯಿಂದ ನಡೆದಿದೆ.ಮಹಾ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು ಎಂದರು.ಇವೊಂದು ದೇವತಾ ಕಾರ್ಯದಲ್ಲಿ ಭಾಗಿಯಾದ ಎಲ್ಲರಿಗೂ ಶಾನ್ಕಟ್ಟು ಕುಟುಂಬಸ್ಥರ ಪರವಾಗಿ ಧನ್ಯವಾದವನ್ನು ಅರ್ಪಿಸಿದರು.
ಈ ಸಂದರ್ಭದಲ್ಲಿ ಶಾನ್ಕಟ್ಟು ಕುಟುಂಬಸ್ಥರು,ಗ್ರಾಮಸ್ಥರು ಉಪಸ್ಥಿತರಿದ್ದರು .
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…