ಕುಂದಾಪುರ

ಏಕ ಪವಿತ್ರ ನಾಗಮಂಡಲೋತ್ಸವ ಸಂಪನ್ನ

Share

ಕುಂದಾಪುರ:ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ವತಿಯಿಂದ ಕುಟುಂಬದ ಆದಿ ಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ಸಂಪನ್ನಗೊಂಡಿತು.
ಶ್ರೀನಾಗ ದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸೇವೆ ಜರುಗಿತು.ಸಂಜೆ ದೀಪಾರಾಧನೆ,ಹಾಲಿಟ್ಟು ಸೇವೆ, ಸಂದರ್ಶನ,ಪ್ರಸಾದ ವಿತರಣೆ,ಮಂಗಲ ಪುಣ್ಯಾಹ್ನ, ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.ಸಾವಿರಾರು ಜನರು ಆಗಮಿಸಿ ಶ್ರೀ ನಾಗದೇವರ ದರ್ಶನವನ್ನು ಪಡೆದರು.ವಾದ್ಯ ಘೋಷದೊಂದಿಗೆ ನಾಗ ಪಾತ್ರಿಗಳನ್ನು ಮಂಟಪಕ್ಕೆ ಬರಮಾಡಿಕೊಳ್ಳಲಾಯಿತು.
ಶಾನ್ಕಟ್ಟು ಕೆಳಗಿನ ಮನೆ ಚಂದ್ರಹಾಸ ಶೆಟ್ಟಿ ಮಾತನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ನಾಗದೇವರಿಗೆ ಪ್ರಧಾನವಾದ ಸ್ಥಾನ ಇದೆ.ಕಲಿಯುಗದಲ್ಲಿ ಕಣ್ಣಿಗೆ ಕಾಣುವ ನಾಗ ದೇವರನ್ನು ವಿಶೇಷ ರೀತಿಯಲ್ಲಿ ಆರಾಧಿಸಿಕೊಂಡು ಬರಲಾಗುತ್ತಿದ್ದು ಸಂತಾನ ಕಾರಕನಾದ ನಾಗ ದೇವರಿಗೆ ನಾಗ ಮಂಡಲ ಸೇವೆಯನ್ನು ಭಕ್ತಿಯಿಂದ ಸಮರ್ಪಿಸಲಾಗಿದೆ ಎಂದು ಹೇಳಿದರು.ಕನಸಿನಲ್ಲೂ ಅಂದುಕೊಳ್ಳದ ರೀತಿಯಲ್ಲಿ ಇವೊಂದು ಧಾರ್ಮಿಕ ವಿಜೃಂಭಣೆಯಿಂದ ನಡೆದಿದೆ ಎಂದರು.
ರಾಘವೇಂದ್ರ ಶೆಟ್ಟಿ ತೊಂಬಟ್ಟು ಮಾತನಾಡಿ,ಏಕ ಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.ಇವೊಂದು‌ ದೇವತಾ ಕಾರ್ಯ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಸ್ವಯಂ ಸೇವಕರಿಗೂ,ಗ್ರಾಮಸ್ಥರರಿಗೂ ಶ್ರೀ ನಾಗದೇವರು ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಚಂದ್ರ ಜೋಗಿ ಶಾನ್ಕಟ್ಟು ಮಾತನಾಡಿ,ಕೆಳಗಿನ ಮನೆ ಕುಟುಂಬಸ್ಥರು ನಡೆಸಿರುವ ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಅಚ್ಚುಕಟ್ಟಾಗಿ ನಡೆದಿದೆ.ಊರಿನಲ್ಲಿ ಹಬ್ಬದ ವಾತಾವರಣವೇ ಸೃಷ್ಟಿ ಆಗಿದೆ ಎಂದು ಹೇಳಿದರು.ಮೂರರಿಂದ ನಾಲ್ಕು ತಿಂಗಳು ಕಾಲ ಶ್ರಮ ವಹಿಸಲಾಗಿದ್ದು ಎಲ್ಲರ ಸಹಕಾರದಿಂದ ವಿಜೃಂಭಣೆಯಿಂದ ಸಂಮಾಪ್ತಿಗೊಂಡಿದೆ ಎಂದರು.
ಸಂತೋಷ ಶೆಟ್ಟಿ ಕೆಳಗಿನ ಮನೆ ಶಾನ್ಕಟ್ಟು ಮಾತನಾಡಿ,ಶ್ರೀ ನಾಗ ದೇವರ ನಾಗಮಂಡಲೋತ್ಸವ ತುಂಬಾ ಯಶಸ್ವಿಯಾಗಿ ವಿಜೃಂಭಣೆಯಿಂದ ನಡೆದಿದೆ.ಊರಿನವರ ಸಹಕಾರ ಮತ್ತು ಶಾನ್ಕಟ್ಟು ಕುಟುಂಬಸ್ಥರ ಸಹಕಾರ ಮುಖ್ಯವಾಗಿದ್ದು ಜಿಲ್ಲೆ,ಹೊರ ರಾಜ್ಯಗಳಿಂದಲೂ ಭಕ್ತರು ಭಾಗವಹಿಸಿದ್ದಾರೆ.ಧನ ಸಹಾಯ ಮತ್ತು ಹೊರೆ ಕಾಣಿಕೆ ನೀಡಿದವರಿಗೆ ಧನ್ಯವಾದವನ್ನು ಅರ್ಪಿಸಿದರು.
ಶಶಿಧರ ಶೆಟ್ಟಿ ಮಾತನಾಡಿ, ಸಾವಿರಾರು ಜನರು ಭೇಟಿ ನೀಡಿ ಅನ್ನಪ್ರಸಾದವನ್ನು ಸ್ವೀಕರಿಸಿದ್ದಾರೆ.ಉಗ್ರಾಣ, ಪಾಕಶಾಲೆ ಪ್ರತಿಯೊಂದು ಯಾವುದೇ ರೀತಿಯ ಚುತ್ತಿ ಬಾರದೆ ವ್ಯವಸ್ಥಿತವಾದ ರೀತಿಯಲ್ಲಿ ನಡೆದಿದೆ ಎಂದು ಹೇಳಿದರು.
ಮನೋಹರ ಶೆಟ್ಟಿ ಮಾತನಾಡಿ,
ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಸಹಕಾರದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ವಿದ್ಯುಕ್ತವಾಗಿ ನಡೆದಿದೆ.ಅನ್ನ ಪ್ರಸಾದವನ್ನು ಸ್ವೀಕರಿಸಲು ಬಂದಂತಹ ಭಕ್ತಾದಿಗಳು ಶಾಂತ ಚಿತ್ತದಿಂದ ಸೇವೆಯಲ್ಲಿ ಪಾಲ್ಗೊಂಡಿರುವುದು ಖುಷಿ ವಿಚಾರವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಂಡಲ ಮಂಟಪದಲ್ಲಿ ಶ್ರೀ ನಾಗದೇವರ ಸೇವೆ ವಿಜೃಂಭಣೆಯಿಂದ ನಡೆಯಿತು.ಭಕ್ತರು ಮಂತ್ರ ಮುಗ್ಧರಾಗಿ ನಾಗದೇವರ ಸೇವೆಯಲ್ಲಿ ಪಾಲ್ಗೊಂಡಿದ್ದರು.ಪ್ರಧಾನ ತಂತ್ರಿಗಳಾದ ಕೆ.ವೇದ ಮೂರ್ತಿ ಶ್ರೀಪತಿ ಭಟ್ ಕಂಬಿಕಲ್ಲು ಅವರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ನಾಗಪಾತ್ರಿಗಳಾದ ಅಂಪಾರು‌ ಎ.ರವಿರಾಜ ದರ್ಶನ ಸೇವೆಯನ್ನು ನೀಡಿದರು.ಸರ್ವೋತ್ತಮ ವೈದ್ಯರ ತಂಡ ದಕ್ಕೆ ಬಲಿ ಸೇವೆ ನೆರವೇರಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago