ಕುಂದಾಪುರ

ಏಕ ಪವಿತ್ರ ನಾಗಮಂಡಲೋತ್ಸವ ಸಂಪನ್ನ

Share

ಕುಂದಾಪುರ:ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ವತಿಯಿಂದ ಕುಟುಂಬದ ಆದಿ ಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ಸಂಪನ್ನಗೊಂಡಿತು.
ಶ್ರೀನಾಗ ದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸೇವೆ ಜರುಗಿತು.ಸಂಜೆ ದೀಪಾರಾಧನೆ,ಹಾಲಿಟ್ಟು ಸೇವೆ, ಸಂದರ್ಶನ,ಪ್ರಸಾದ ವಿತರಣೆ,ಮಂಗಲ ಪುಣ್ಯಾಹ್ನ, ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.ಸಾವಿರಾರು ಜನರು ಆಗಮಿಸಿ ಶ್ರೀ ನಾಗದೇವರ ದರ್ಶನವನ್ನು ಪಡೆದರು.ವಾದ್ಯ ಘೋಷದೊಂದಿಗೆ ನಾಗ ಪಾತ್ರಿಗಳನ್ನು ಮಂಟಪಕ್ಕೆ ಬರಮಾಡಿಕೊಳ್ಳಲಾಯಿತು.
ಶಾನ್ಕಟ್ಟು ಕೆಳಗಿನ ಮನೆ ಚಂದ್ರಹಾಸ ಶೆಟ್ಟಿ ಮಾತನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ನಾಗದೇವರಿಗೆ ಪ್ರಧಾನವಾದ ಸ್ಥಾನ ಇದೆ.ಕಲಿಯುಗದಲ್ಲಿ ಕಣ್ಣಿಗೆ ಕಾಣುವ ನಾಗ ದೇವರನ್ನು ವಿಶೇಷ ರೀತಿಯಲ್ಲಿ ಆರಾಧಿಸಿಕೊಂಡು ಬರಲಾಗುತ್ತಿದ್ದು ಸಂತಾನ ಕಾರಕನಾದ ನಾಗ ದೇವರಿಗೆ ನಾಗ ಮಂಡಲ ಸೇವೆಯನ್ನು ಭಕ್ತಿಯಿಂದ ಸಮರ್ಪಿಸಲಾಗಿದೆ ಎಂದು ಹೇಳಿದರು.ಕನಸಿನಲ್ಲೂ ಅಂದುಕೊಳ್ಳದ ರೀತಿಯಲ್ಲಿ ಇವೊಂದು ಧಾರ್ಮಿಕ ವಿಜೃಂಭಣೆಯಿಂದ ನಡೆದಿದೆ ಎಂದರು.
ರಾಘವೇಂದ್ರ ಶೆಟ್ಟಿ ತೊಂಬಟ್ಟು ಮಾತನಾಡಿ,ಏಕ ಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.ಇವೊಂದು‌ ದೇವತಾ ಕಾರ್ಯ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಸ್ವಯಂ ಸೇವಕರಿಗೂ,ಗ್ರಾಮಸ್ಥರರಿಗೂ ಶ್ರೀ ನಾಗದೇವರು ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಚಂದ್ರ ಜೋಗಿ ಶಾನ್ಕಟ್ಟು ಮಾತನಾಡಿ,ಕೆಳಗಿನ ಮನೆ ಕುಟುಂಬಸ್ಥರು ನಡೆಸಿರುವ ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಅಚ್ಚುಕಟ್ಟಾಗಿ ನಡೆದಿದೆ.ಊರಿನಲ್ಲಿ ಹಬ್ಬದ ವಾತಾವರಣವೇ ಸೃಷ್ಟಿ ಆಗಿದೆ ಎಂದು ಹೇಳಿದರು.ಮೂರರಿಂದ ನಾಲ್ಕು ತಿಂಗಳು ಕಾಲ ಶ್ರಮ ವಹಿಸಲಾಗಿದ್ದು ಎಲ್ಲರ ಸಹಕಾರದಿಂದ ವಿಜೃಂಭಣೆಯಿಂದ ಸಂಮಾಪ್ತಿಗೊಂಡಿದೆ ಎಂದರು.
ಸಂತೋಷ ಶೆಟ್ಟಿ ಕೆಳಗಿನ ಮನೆ ಶಾನ್ಕಟ್ಟು ಮಾತನಾಡಿ,ಶ್ರೀ ನಾಗ ದೇವರ ನಾಗಮಂಡಲೋತ್ಸವ ತುಂಬಾ ಯಶಸ್ವಿಯಾಗಿ ವಿಜೃಂಭಣೆಯಿಂದ ನಡೆದಿದೆ.ಊರಿನವರ ಸಹಕಾರ ಮತ್ತು ಶಾನ್ಕಟ್ಟು ಕುಟುಂಬಸ್ಥರ ಸಹಕಾರ ಮುಖ್ಯವಾಗಿದ್ದು ಜಿಲ್ಲೆ,ಹೊರ ರಾಜ್ಯಗಳಿಂದಲೂ ಭಕ್ತರು ಭಾಗವಹಿಸಿದ್ದಾರೆ.ಧನ ಸಹಾಯ ಮತ್ತು ಹೊರೆ ಕಾಣಿಕೆ ನೀಡಿದವರಿಗೆ ಧನ್ಯವಾದವನ್ನು ಅರ್ಪಿಸಿದರು.
ಶಶಿಧರ ಶೆಟ್ಟಿ ಮಾತನಾಡಿ, ಸಾವಿರಾರು ಜನರು ಭೇಟಿ ನೀಡಿ ಅನ್ನಪ್ರಸಾದವನ್ನು ಸ್ವೀಕರಿಸಿದ್ದಾರೆ.ಉಗ್ರಾಣ, ಪಾಕಶಾಲೆ ಪ್ರತಿಯೊಂದು ಯಾವುದೇ ರೀತಿಯ ಚುತ್ತಿ ಬಾರದೆ ವ್ಯವಸ್ಥಿತವಾದ ರೀತಿಯಲ್ಲಿ ನಡೆದಿದೆ ಎಂದು ಹೇಳಿದರು.
ಮನೋಹರ ಶೆಟ್ಟಿ ಮಾತನಾಡಿ,
ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಸಹಕಾರದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ವಿದ್ಯುಕ್ತವಾಗಿ ನಡೆದಿದೆ.ಅನ್ನ ಪ್ರಸಾದವನ್ನು ಸ್ವೀಕರಿಸಲು ಬಂದಂತಹ ಭಕ್ತಾದಿಗಳು ಶಾಂತ ಚಿತ್ತದಿಂದ ಸೇವೆಯಲ್ಲಿ ಪಾಲ್ಗೊಂಡಿರುವುದು ಖುಷಿ ವಿಚಾರವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಂಡಲ ಮಂಟಪದಲ್ಲಿ ಶ್ರೀ ನಾಗದೇವರ ಸೇವೆ ವಿಜೃಂಭಣೆಯಿಂದ ನಡೆಯಿತು.ಭಕ್ತರು ಮಂತ್ರ ಮುಗ್ಧರಾಗಿ ನಾಗದೇವರ ಸೇವೆಯಲ್ಲಿ ಪಾಲ್ಗೊಂಡಿದ್ದರು.ಪ್ರಧಾನ ತಂತ್ರಿಗಳಾದ ಕೆ.ವೇದ ಮೂರ್ತಿ ಶ್ರೀಪತಿ ಭಟ್ ಕಂಬಿಕಲ್ಲು ಅವರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ನಾಗಪಾತ್ರಿಗಳಾದ ಅಂಪಾರು‌ ಎ.ರವಿರಾಜ ದರ್ಶನ ಸೇವೆಯನ್ನು ನೀಡಿದರು.ಸರ್ವೋತ್ತಮ ವೈದ್ಯರ ತಂಡ ದಕ್ಕೆ ಬಲಿ ಸೇವೆ ನೆರವೇರಿಸಿದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago