ಕುಂದಾಪುರ

ಏಕ ಪವಿತ್ರ ನಾಗಮಂಡಲೋತ್ಸವ ಸಂಪನ್ನ

Share

ಕುಂದಾಪುರ:ತಾಲೂಕಿನ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ವತಿಯಿಂದ ಕುಟುಂಬದ ಆದಿ ಬನದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ಸಂಪನ್ನಗೊಂಡಿತು.
ಶ್ರೀನಾಗ ದೇವರ ಏಕ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ಸೇವೆ ಜರುಗಿತು.ಸಂಜೆ ದೀಪಾರಾಧನೆ,ಹಾಲಿಟ್ಟು ಸೇವೆ, ಸಂದರ್ಶನ,ಪ್ರಸಾದ ವಿತರಣೆ,ಮಂಗಲ ಪುಣ್ಯಾಹ್ನ, ಮಂತ್ರಾಕ್ಷತೆ ಕಾರ್ಯಕ್ರಮ ನಡೆಯಿತು.ಸಾವಿರಾರು ಜನರು ಆಗಮಿಸಿ ಶ್ರೀ ನಾಗದೇವರ ದರ್ಶನವನ್ನು ಪಡೆದರು.ವಾದ್ಯ ಘೋಷದೊಂದಿಗೆ ನಾಗ ಪಾತ್ರಿಗಳನ್ನು ಮಂಟಪಕ್ಕೆ ಬರಮಾಡಿಕೊಳ್ಳಲಾಯಿತು.
ಶಾನ್ಕಟ್ಟು ಕೆಳಗಿನ ಮನೆ ಚಂದ್ರಹಾಸ ಶೆಟ್ಟಿ ಮಾತನಾಡಿ, ಅವಿಭಜಿತ ದ.ಕ ಜಿಲ್ಲೆಯಲ್ಲಿ ನಾಗದೇವರಿಗೆ ಪ್ರಧಾನವಾದ ಸ್ಥಾನ ಇದೆ.ಕಲಿಯುಗದಲ್ಲಿ ಕಣ್ಣಿಗೆ ಕಾಣುವ ನಾಗ ದೇವರನ್ನು ವಿಶೇಷ ರೀತಿಯಲ್ಲಿ ಆರಾಧಿಸಿಕೊಂಡು ಬರಲಾಗುತ್ತಿದ್ದು ಸಂತಾನ ಕಾರಕನಾದ ನಾಗ ದೇವರಿಗೆ ನಾಗ ಮಂಡಲ ಸೇವೆಯನ್ನು ಭಕ್ತಿಯಿಂದ ಸಮರ್ಪಿಸಲಾಗಿದೆ ಎಂದು ಹೇಳಿದರು.ಕನಸಿನಲ್ಲೂ ಅಂದುಕೊಳ್ಳದ ರೀತಿಯಲ್ಲಿ ಇವೊಂದು ಧಾರ್ಮಿಕ ವಿಜೃಂಭಣೆಯಿಂದ ನಡೆದಿದೆ ಎಂದರು.
ರಾಘವೇಂದ್ರ ಶೆಟ್ಟಿ ತೊಂಬಟ್ಟು ಮಾತನಾಡಿ,ಏಕ ಪವಿತ್ರ ನಾಗಮಂಡಲೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿದೆ.ಇವೊಂದು‌ ದೇವತಾ ಕಾರ್ಯ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಸ್ವಯಂ ಸೇವಕರಿಗೂ,ಗ್ರಾಮಸ್ಥರರಿಗೂ ಶ್ರೀ ನಾಗದೇವರು ಒಳಿತನ್ನು ಮಾಡಲಿ ಎಂದು ಹಾರೈಸಿದರು.
ಚಂದ್ರ ಜೋಗಿ ಶಾನ್ಕಟ್ಟು ಮಾತನಾಡಿ,ಕೆಳಗಿನ ಮನೆ ಕುಟುಂಬಸ್ಥರು ನಡೆಸಿರುವ ಶ್ರೀ ನಾಗದೇವರ ಏಕ ಪವಿತ್ರ ನಾಗಮಂಡಲೋತ್ಸವ ಅಚ್ಚುಕಟ್ಟಾಗಿ ನಡೆದಿದೆ.ಊರಿನಲ್ಲಿ ಹಬ್ಬದ ವಾತಾವರಣವೇ ಸೃಷ್ಟಿ ಆಗಿದೆ ಎಂದು ಹೇಳಿದರು.ಮೂರರಿಂದ ನಾಲ್ಕು ತಿಂಗಳು ಕಾಲ ಶ್ರಮ ವಹಿಸಲಾಗಿದ್ದು ಎಲ್ಲರ ಸಹಕಾರದಿಂದ ವಿಜೃಂಭಣೆಯಿಂದ ಸಂಮಾಪ್ತಿಗೊಂಡಿದೆ ಎಂದರು.
ಸಂತೋಷ ಶೆಟ್ಟಿ ಕೆಳಗಿನ ಮನೆ ಶಾನ್ಕಟ್ಟು ಮಾತನಾಡಿ,ಶ್ರೀ ನಾಗ ದೇವರ ನಾಗಮಂಡಲೋತ್ಸವ ತುಂಬಾ ಯಶಸ್ವಿಯಾಗಿ ವಿಜೃಂಭಣೆಯಿಂದ ನಡೆದಿದೆ.ಊರಿನವರ ಸಹಕಾರ ಮತ್ತು ಶಾನ್ಕಟ್ಟು ಕುಟುಂಬಸ್ಥರ ಸಹಕಾರ ಮುಖ್ಯವಾಗಿದ್ದು ಜಿಲ್ಲೆ,ಹೊರ ರಾಜ್ಯಗಳಿಂದಲೂ ಭಕ್ತರು ಭಾಗವಹಿಸಿದ್ದಾರೆ.ಧನ ಸಹಾಯ ಮತ್ತು ಹೊರೆ ಕಾಣಿಕೆ ನೀಡಿದವರಿಗೆ ಧನ್ಯವಾದವನ್ನು ಅರ್ಪಿಸಿದರು.
ಶಶಿಧರ ಶೆಟ್ಟಿ ಮಾತನಾಡಿ, ಸಾವಿರಾರು ಜನರು ಭೇಟಿ ನೀಡಿ ಅನ್ನಪ್ರಸಾದವನ್ನು ಸ್ವೀಕರಿಸಿದ್ದಾರೆ.ಉಗ್ರಾಣ, ಪಾಕಶಾಲೆ ಪ್ರತಿಯೊಂದು ಯಾವುದೇ ರೀತಿಯ ಚುತ್ತಿ ಬಾರದೆ ವ್ಯವಸ್ಥಿತವಾದ ರೀತಿಯಲ್ಲಿ ನಡೆದಿದೆ ಎಂದು ಹೇಳಿದರು.
ಮನೋಹರ ಶೆಟ್ಟಿ ಮಾತನಾಡಿ,
ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರ ಸಹಕಾರದಲ್ಲಿ ಏಕ ಪವಿತ್ರ ನಾಗಮಂಡಲೋತ್ಸವ ವಿದ್ಯುಕ್ತವಾಗಿ ನಡೆದಿದೆ.ಅನ್ನ ಪ್ರಸಾದವನ್ನು ಸ್ವೀಕರಿಸಲು ಬಂದಂತಹ ಭಕ್ತಾದಿಗಳು ಶಾಂತ ಚಿತ್ತದಿಂದ ಸೇವೆಯಲ್ಲಿ ಪಾಲ್ಗೊಂಡಿರುವುದು ಖುಷಿ ವಿಚಾರವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಂಪಾರು ಗ್ರಾಮದ ಶಾನ್ಕಟ್ಟು ಕೆಳಗಿನ ಮನೆ ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮಂಡಲ ಮಂಟಪದಲ್ಲಿ ಶ್ರೀ ನಾಗದೇವರ ಸೇವೆ ವಿಜೃಂಭಣೆಯಿಂದ ನಡೆಯಿತು.ಭಕ್ತರು ಮಂತ್ರ ಮುಗ್ಧರಾಗಿ ನಾಗದೇವರ ಸೇವೆಯಲ್ಲಿ ಪಾಲ್ಗೊಂಡಿದ್ದರು.ಪ್ರಧಾನ ತಂತ್ರಿಗಳಾದ ಕೆ.ವೇದ ಮೂರ್ತಿ ಶ್ರೀಪತಿ ಭಟ್ ಕಂಬಿಕಲ್ಲು ಅವರು ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ನಾಗಪಾತ್ರಿಗಳಾದ ಅಂಪಾರು‌ ಎ.ರವಿರಾಜ ದರ್ಶನ ಸೇವೆಯನ್ನು ನೀಡಿದರು.ಸರ್ವೋತ್ತಮ ವೈದ್ಯರ ತಂಡ ದಕ್ಕೆ ಬಲಿ ಸೇವೆ ನೆರವೇರಿಸಿದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago