ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮದ ಸಪರಿವಾರ ಶ್ರೀ ಪಾದ್ಮಾವತಿ ಅಮ್ಮನವರ ದೇವಸ್ಥಾನದ ಷುಷ್ಠಿ ಮಹೋತ್ಸವ ಹಾಗೂ ಶ್ರೀರಾಮ ನೂತನ ಭಜನಾ ಮಂದಿರ ಲೋಕಾರ್ಪಣೆ ಮತ್ತು ಶ್ರೀರಾಮ ದೇವರ ಬಿಂಬ ಪ್ರತಿಷ್ಠೆ,ಶ್ರೀ ಬೊಬ್ಬರ್ಯ ದೇವರಿಗೆ ಬೆಳ್ಳಿ ಮುಖವಾಡ ಸಮರ್ಪಣೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಬುಧವಾರ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚಕರಾದ ವೇದ ಮೂರ್ತಿ ಪರಮೇಶ್ವರ ಅಡಿಗರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಮಹಾ ಅನ್ನಪ್ರಸಾದವನ್ನು ಸ್ವೀಕರಿಸಿದರು.ಯಕ್ಷಗಾನ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಭಾಸ್ಕರ ಪುತ್ರನ್ ಮಾತನಾಡಿ,ಪ್ರಶ್ನಾ ಚಿಂತನಾ ಕಾರ್ಯದಲ್ಲಿ ತಿಳಿದು ಬಂದಂತೆ ತಾಯಿ ಪದ್ಮಾವತಿ ಅಮ್ಮನವರ ಪುಷ್ಠಿ ಮಹೋತ್ಸವ ಹಾಗೂ ಶ್ರೀರಾಮ ದೇವರ ಅಮೃತ ಶಿಲೆಯ ಬಿಂಬ ಪ್ರತಿಷ್ಠಾಪನೆ ಮತ್ತು ನೂತನ ಭಜನಾ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ದಾನಿಗಳು ಮತ್ತು ಊರಿನವರ ಸಹಕಾರದಿಂದ ವಿಜೃಂಭಣೆಯಿಂದ ನಡೆದಿದೆ.ಶ್ರೀ ಬೊಬ್ಬರ್ಯ ದೇವರಿಗೆ ಬೆಳ್ಳಿ ಮುಖವಾಡ ಸಮರ್ಪಣೆ ಕಾರ್ಯವನ್ನು ಮಾಡಲಾಗಿದೆ ಎಂದು ಹೇಳಿದರು.
ದೇವಸ್ಥಾನದ ಪ್ರಧಾನ ಅರ್ಚಕರಾದ ಪರಮೇಶ್ವರ ಅಡಿಗ ಅವರು ಮಾತನಾಡಿ, ಅಮ್ಮನವರ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಮತ್ತು ಶ್ರೀರಾಮ ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಸಮಾಪನೆ ಗೊಂಡಿದೆ ಎಂದು ಹೇಳಿದರು.ಕ್ಷೇತ್ರದ ನಾಗದೇವರಿಗೆ ಆಶ್ಲೇಷಾ ಬಲಿಯನ್ನು ನೆರವೇರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಏಪ್ರಿಲ್ 25 ರಂದು ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರು ಶ್ರೀ ಪದ್ಮಾವತಿ ಅಮ್ಮನವರ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ.ರಾಮ ಭಜನೆಯ ದೀಪಸ್ಥಾಪನೆ ಸಹಿತ ಆಶೀರ್ವಚನ ನೀಡಲಿದ್ದಾರೆ.
ಏಪ್ರಿಲ್ 29 ರಂದು ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.ಶ್ರೀರಾಮ ದೇವರಿಗೆ ನೂತನ ಪಲ್ಲಕ್ಕಿ ಸಮರ್ಪಣೆ ಕಾರ್ಯಕ್ರಮ ಜರುಗಲಿದೆ.ಬಳಿಕ ಸ್ವಾಮಿಜಿಗಳು ಆಶೀರ್ವಚನ ನೀಡಲಿದ್ದಾರೆ.ಮೇ 01 ರಂದು ಅಖಂಡ ಭಜನಾ ಕಾರ್ಯಕ್ರಮ, ಅನ್ನಸಂತರ್ಪಣೆ,ಸಾಯಂಕಾಲ ಪುರಮೆರವಣಿಗೆ ಜರುಗಲಿದೆ.ಮೇ 02 ರಂದು ಭಜನಾ ಮಂಗಲೋತ್ಸವ ಕಾರ್ಯಕ್ರಮ ನಡೆಯಲಿದೆ.
ವರದಿ:-ಜಗದೀಶ ದೇವಾಡಿಗ
ಸುದ್ದಿಗಳನ್ನು ನಮ್ಮ ಜಾಲತಾಣದಲ್ಲಿ ಪ್ರಕಟಿಸಲು ಸಂಪರ್ಕಿಸಿ-9916284048
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…