ಕುಂದಾಪುರ

ಗಾಳಿ ಮಳೆಗೆ ಮರ ಬಿದ್ದು ಹಾನಿ,ಸಂತ್ರಸ್ತರ ಮನೆಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

Share

ಸಿದ್ದಾಪುರ: ಇತ್ತೀಚಿಗೆ ಸುರಿದ ಗಾಳಿಮಳೆಯಿಂದಾಗಿ ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಣ ವ್ಯಾಪ್ತಿಯ ಮನೆಯೊಂದರ ಮೇಲೆ ಮರ ಬಿದ್ದು ಮನೆಯೆ ಮೇಲ್ಛಾವಣಿಗೆ ಸಂಪೂರ್ಣ ಹಾನಿಯುಂಟಾಗಿದ್ದು, ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು,ಮರ ಬಿದ್ದು ಹಾನಿಯಾದ ಮನೆಯ ಭಾಗವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತಲ್ಲೀನರಾಗಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಅವರಿಗೆ ಸಿದ್ದಾಪುರ, ಹೊಸಂಗಡಿ ಭಾಗದ ಕಾರ್ಯಕರ್ತರು ಮನೆ ಮೇಲೆ ಮರ ಬಿದ್ದಿರುವ ಬಗ್ಗೆ ಮಾಹಿತಿ ನೀಡಿದ ಕೂಡಲೇ ಬುಧವಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.ಮನೆ ಮರ ಬಿದ್ದ ಪರಿಣಾಮ ಮನೆಯು ಸಂಪೂರ್ಣ ಹಾನಿಯಾಗಿದ್ದು ಮಾತ್ರವಲ್ಲದೇ ಮನೆಯ ಮೂವರಿಗೆ ಗಂಭೀರ ಸ್ವರೂಪದ ಗಾಯವೂ ಆಗಿದೆ. ಗಾಯಗೊಂಡಿರುವ ಮನೆಯ ಸದಸ್ಯರೊಂದಿಗೂ ಕೆಲಕಾಲ ಶಾಸಕರು ಮಾತನಾಡಿ ಅವರನ್ನು ಸಂತೈಸಿದರು.
ಮಳೆ ಮತ್ತು ಗಾಳಿ ಜೋರಾಗಿ ಬಂದಿದ್ದರಿಂದ ಮರ ಕುಸಿದು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಭಾಗಕ್ಕೆ ಸಂಪೂರ್ಣ ಹಾನಿಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಗರಿಷ್ಠ ಎಷ್ಟು ಪರಿಹಾರ ಒದಗಿಸಲು ಸಾಧ್ಯವೋ ಆ ಪ್ರಯತ್ನ ಮಾಡಲಾಗುವುದು. ಪಂಚಾಯತಿ,ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೂ ಮಾಹಿತಿ ಹೋಗಲಿದೆ.ನೊಂದ ಕುಟುಂಬಕ್ಕೆ ಅಗತ್ಯ ಪರಿಹಾರ ಸಿಗಲಿದೆ ಎಂದರು.
ಮೂರು ದಿನಗಳ ಹಿಂದೆ ಸುರಿದ ಧಾರಕಾರ ಮಳೆಗೆ ಬೃಹತ್ ಮರವೊಂದು ಮನೆಯ ಮಲೆ ಬಿದ್ದು ಮನೆಯ ಒಂದು ಭಾಗವನ್ನು ಸಂಪೂರ್ಣ ಹಾನಿ ಮಾಡಿದೆ. ಮೇಲ್ಛಾವಣಿ ಕುಸಿದಿದ್ದು ಮಾತ್ರವಲ್ಲದೇ ಗೋಡೆಗಳು ಬಿರುಕುಬಿಟ್ಟಿವೆ. ಇಡೀ ಮನೆಯ ಪುನರ್ ನಿರ್ಮಾಣ ಆಗಬೇಕಿದೆ. ಹಾಗೆಯೇ ಮರ ಮನೆ ಮೇಲೆ ಬೀಳುವ ಸಂದರ್ಭದಲ್ಲಿ ಮನೆಯೊಳಗಿದ್ದ ಮೂವರಿಗೂ ಗಂಭೀರ ಗಾಯಗಳಾಗಿವೆ. ಈ ವಿಷಯ ತಿಳಿದ ಕೂಡಲೇ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ನೋಂದ ಕುಟುಂಬದವರೊಂದಿಗೆ ಮಾತನಾಡುವ ಮಾನವೀಯ ಕಾರ್ಯ ನಡೆಸಿದ್ದಾರೆ.
ಈ ವೇಳೆ ಬಿಜೆಪಿ ಪ್ರಮುಖರಾದ ಸುರೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಕಲ್ ಗೆದ್ದೆ ಜಿಲ್ಲಾ ಪಂಚಾಯತ್ ಸದಸ್ಯರಾದ ರೋಹಿತ್ ಶೆಟ್ಟಿ,ಶ್ರೀಗಣೇಶ ಗಾಣಿಗ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago