ಕುಂದಾಪುರ

ಗಾಳಿ ಮಳೆಗೆ ಮರ ಬಿದ್ದು ಹಾನಿ,ಸಂತ್ರಸ್ತರ ಮನೆಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

Share

ಸಿದ್ದಾಪುರ: ಇತ್ತೀಚಿಗೆ ಸುರಿದ ಗಾಳಿಮಳೆಯಿಂದಾಗಿ ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಣ ವ್ಯಾಪ್ತಿಯ ಮನೆಯೊಂದರ ಮೇಲೆ ಮರ ಬಿದ್ದು ಮನೆಯೆ ಮೇಲ್ಛಾವಣಿಗೆ ಸಂಪೂರ್ಣ ಹಾನಿಯುಂಟಾಗಿದ್ದು, ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು,ಮರ ಬಿದ್ದು ಹಾನಿಯಾದ ಮನೆಯ ಭಾಗವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತಲ್ಲೀನರಾಗಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಅವರಿಗೆ ಸಿದ್ದಾಪುರ, ಹೊಸಂಗಡಿ ಭಾಗದ ಕಾರ್ಯಕರ್ತರು ಮನೆ ಮೇಲೆ ಮರ ಬಿದ್ದಿರುವ ಬಗ್ಗೆ ಮಾಹಿತಿ ನೀಡಿದ ಕೂಡಲೇ ಬುಧವಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.ಮನೆ ಮರ ಬಿದ್ದ ಪರಿಣಾಮ ಮನೆಯು ಸಂಪೂರ್ಣ ಹಾನಿಯಾಗಿದ್ದು ಮಾತ್ರವಲ್ಲದೇ ಮನೆಯ ಮೂವರಿಗೆ ಗಂಭೀರ ಸ್ವರೂಪದ ಗಾಯವೂ ಆಗಿದೆ. ಗಾಯಗೊಂಡಿರುವ ಮನೆಯ ಸದಸ್ಯರೊಂದಿಗೂ ಕೆಲಕಾಲ ಶಾಸಕರು ಮಾತನಾಡಿ ಅವರನ್ನು ಸಂತೈಸಿದರು.
ಮಳೆ ಮತ್ತು ಗಾಳಿ ಜೋರಾಗಿ ಬಂದಿದ್ದರಿಂದ ಮರ ಕುಸಿದು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಭಾಗಕ್ಕೆ ಸಂಪೂರ್ಣ ಹಾನಿಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಗರಿಷ್ಠ ಎಷ್ಟು ಪರಿಹಾರ ಒದಗಿಸಲು ಸಾಧ್ಯವೋ ಆ ಪ್ರಯತ್ನ ಮಾಡಲಾಗುವುದು. ಪಂಚಾಯತಿ,ತಹಶೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೂ ಮಾಹಿತಿ ಹೋಗಲಿದೆ.ನೊಂದ ಕುಟುಂಬಕ್ಕೆ ಅಗತ್ಯ ಪರಿಹಾರ ಸಿಗಲಿದೆ ಎಂದರು.
ಮೂರು ದಿನಗಳ ಹಿಂದೆ ಸುರಿದ ಧಾರಕಾರ ಮಳೆಗೆ ಬೃಹತ್ ಮರವೊಂದು ಮನೆಯ ಮಲೆ ಬಿದ್ದು ಮನೆಯ ಒಂದು ಭಾಗವನ್ನು ಸಂಪೂರ್ಣ ಹಾನಿ ಮಾಡಿದೆ. ಮೇಲ್ಛಾವಣಿ ಕುಸಿದಿದ್ದು ಮಾತ್ರವಲ್ಲದೇ ಗೋಡೆಗಳು ಬಿರುಕುಬಿಟ್ಟಿವೆ. ಇಡೀ ಮನೆಯ ಪುನರ್ ನಿರ್ಮಾಣ ಆಗಬೇಕಿದೆ. ಹಾಗೆಯೇ ಮರ ಮನೆ ಮೇಲೆ ಬೀಳುವ ಸಂದರ್ಭದಲ್ಲಿ ಮನೆಯೊಳಗಿದ್ದ ಮೂವರಿಗೂ ಗಂಭೀರ ಗಾಯಗಳಾಗಿವೆ. ಈ ವಿಷಯ ತಿಳಿದ ಕೂಡಲೇ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ನೋಂದ ಕುಟುಂಬದವರೊಂದಿಗೆ ಮಾತನಾಡುವ ಮಾನವೀಯ ಕಾರ್ಯ ನಡೆಸಿದ್ದಾರೆ.
ಈ ವೇಳೆ ಬಿಜೆಪಿ ಪ್ರಮುಖರಾದ ಸುರೇಶ್ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ ಕಲ್ ಗೆದ್ದೆ ಜಿಲ್ಲಾ ಪಂಚಾಯತ್ ಸದಸ್ಯರಾದ ರೋಹಿತ್ ಶೆಟ್ಟಿ,ಶ್ರೀಗಣೇಶ ಗಾಣಿಗ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 hour ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago